Advertisement
ಅನುಕ್ರಮ

ಸ್ವಾತಂತ್ರ್ಯ…….. ನೆನಪಿನಂಗಳದಿಂದ……

Share

ಪ್ರತಿವರ್ಷದಂತೆ ಇಂದು ಸಂಭ್ರಮದ ದಿನ… ಈ ಆಚರಣೆಗಾಗಿ ಎಲ್ಲ ದೇಶಭಕ್ತ ರ ಮನಸ್ಸು ಹಾತೊರೆಯುತ್ತಿದೆ…ಆದರೆ ನನ್ನ ಮನಸ್ಸು ಮರುಗುತ್ತಿದೆ… ಸ್ವಾತಂತ್ರ್ಯ ಎಂಬ ಪದದ ಅರ್ಥವೇನು? ಎಂದೂ ಇಂದಿಗೂ ಅರ್ಥವಾಗಿಲ್ಲ…

ಇಂದು‌ ಹೆತ್ತವರು,ಮಡದಿ ಮಕ್ಕಳನ್ನು ಬಿಟ್ಟು ದೇಶದೊಳಕ್ಕೆ ಪಾಪಿಗಳೆಲ್ಲಿ ನುಸುಳಿ ಬರುವರೋ ಎಂಬ ಆತಂಕದಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು‌‌ ಕಾಯುತ್ತಿದ್ದಾರೆ.. ಸ್ವಾತಂತ್ರ್ಯದ ಸಂಭ್ರಮ ಕ್ಕೆ ತಿರಂಗ ಧ್ವಜವನ್ನು ಬಿಗಿಬಂದೋಬಸ್ತಿನಲ್ಲಿ‌ ಹಾರಿಸುವ ಪರಿಸ್ಥಿತಿ ನಮ್ಮದು.. ಆದರೂ ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ.. ನಾವು ಸ್ವತಂತ್ರ ರು,ಗಾಂಧೀಜಿಯವರು ಯಾವಾಗ ಹೆಣ್ಣು ಮಕ್ಕಳು ರಾತ್ರಿ ವೇಳೆಯಲ್ಲಿ ಒಬ್ಬಂಟಿಗರಾಗಿ ನಡೆಯುತ್ತಾರೋ ಅಂದು ದೇಶ ಸ್ವತಂತವಾದಂತೆ,ಎಂದಿದ್ದರು .ಎಷ್ಟು ಹೆಣ್ಣುಮಕ್ಕಳು ಈ‌‌ ಪವಿತ್ರ ಭಾರತಾಂಭೆಯ ಮಣ್ಣಿನಲ್ಲಿ ರಾತ್ರಿ ಹೊತ್ತು ನಡೆದಿದ್ದಾರೋ ಗೊತ್ತಿಲ್ಲ.. ಆದರೆ ಹಗಲು ಹೊತ್ತಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೂ ಅತ್ಯಾಚಾರದಂತಹ ಘೋರ ಅಪರಾಧಗಳು ನಡೆಯುತ್ತಿರುವುದು ಸುಳ್ಳಲ್ಲ..ಸ್ವಾತಂತ್ರ್ಯ ಕ್ಕಾಗಿ ತಮ್ಮಲ್ಲಿರುವ ಹಣ ಚಿನ್ನಾಭರಣ ಎಲ್ಲವನ್ನೂ ಕೊಟ್ಟು ಈದೇಶಕ್ಕಾಗಿ‌ ಮಡಿದವರು ಅದೆಷ್ಟೋ ಮಂದಿ..ಆದರೆ ಇಂದು ಲೆಕ್ಕ ಇಲ್ಲದಷ್ಟು ಆಸ್ತಿ ಹಣ ಸಂಪಾದಿಸಿ ಮೆರೆಯುವವರು ಅದೆಷ್ಟೋ ಮಂದಿ.. ಹೇಳಲು ಹೊರಟರೆ ಮಗಿಯದ ಕತೆ..‌ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ್ದೇವೆ ನಿಜ..‌ ಆದರೆ ಈ ಕ್ಷಣವೂ ನಾವು ಇನ್ಯಾರದೋ ಆಕ್ರಮಣ ದ ಭಯದಲ್ಲಿದ್ದೇವೆ.. ನಮ್ಮವರ ಕಪಿಮುಷ್ಟಿಯೊಳಗೆ ನಾವು ಬಂಧಿತರಾಗಿದ್ದೇವೆ…. ಬಹುಷ: ಸಂಪೂರ್ಣ ಸ್ವಾತಂತ್ರ್ಯ ಅಸಾಧ್ಯವೇನೋ….?

ಏನೇ ಇರಲಿ.. ನನ್ನೆಲ್ಲಾ ಮಿತ್ರರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು….

ನಮ್ಮೆಲ್ಲರ ಸ್ವಾತಂತ್ರ್ಯ ಕ್ಕೆ ಕಾರಣೀಭೂತರಾದ ಎಲ್ಲರಿಗೂ ನಮಿಸುತ್ತಾ  ಆಚರಣೆಗೆ ಲೋಪ ಬರದಂತೆ ಮೈಯೆಲ್ಲಾ ಕಣ್ಣಾಗಿಸಿ ಮಳೆ ಚಳಿಯ ಹಂಗು ತೊರೆದು ಕಾಯುತ್ತಿರುವ ಎಲ್ಲಾ ಸಹೋದರ ಸೈನಿಕ ಬಾಂಧವರಿಗೆ ತಾಯಿ ಭಾರತಿ ಇನ್ನಷ್ಟು ಶಕ್ತಿ ತುಂಬಲಿ ಆಯಸ್ಸು ಆರೋಗ್ಯ ಕರುಣಿಸಲಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

3 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

11 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

12 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

22 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago