ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಭಾಷಣ ಮಾಡುವ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ. ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವಾನಂದ. ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ವಂದಿಸಿದರು. ವಿದ್ಯಾರ್ಥಿ ಶಿವರಾಮ್ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು.
ಭಾಷಣ ಸ್ಪರ್ಧೆಗೆ ಉಪನ್ಯಾಸಕಿಯರಾದ ರಶ್ಮಿ ಕೆ, ದಿವ್ಯ ಕೆ ಹಾಗೂ ಜಯಶ್ರೀ ತೀರ್ಪುಗಾರಾಗಿ ಸಹಕರಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel