ಅನುಕ್ರಮ

ಹಚ್ಚ ಹಸಿರಿನ ನೆನಪುಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗುಳಿಗೆನ್ನೆಯ ಗೆಳೆಯ,
ನನ್ನೊಳಗೆ ನೀನಿದ್ದೆ ಎಂದು ತಿಳಿಯುವಾಗ ಬಲು ತಡವಾಯಿತು.
ಕಾರಿಡಾರಲ್ಲಿ ನಿಂತಾಗ,ನನಗಾಗಿ
ನಗು ಚೆಲ್ಲುತ್ತಿದ್ದಾಗ ,ನಿನ್ನ ಮೊಗದ ಕಾಂತಿ,
ಸಾವಿರ ವ್ಯಾಟ್ ದೀಪದಂತೆ ಬೆಳಗುತ್ತಿತ್ತು.
ಕತ್ತಲೆಯ ಭಯವ ನಿನ್ನೊಂದಿಗೆ ಹಂಚಿಕೊಂಡಾಗ, ನೀ‌ ನಿನ್ನ
ಕೆಲಸವ ಬಿಟ್ಟು ನನಗಾಗಿ ನಿಂತಾಗ
ನಿನ್ನ ಹೃದಯ ಮಂದಿರದಲ್ಲಿ ನನಗಾಗಿ
ಸ್ನೇಹದ ಸಿಂಹಾಸನವನ್ನೇ ಮೀಸಲಿಟ್ಟಿರುವೆ ಎಂದು ಭಾವಿಸಿದ್ದೆ!
ಮರದ ಮೇಲೆ ಮಂಗಗಳನ್ನು ಕಂಡಾಗಲೆಲ್ಲಾ ನಿನ್ನ ತುಂಟಾಟವ ಅವುಗಳಲ್ಲಿ‌ ಹುಡುಕುತ್ತಿದ್ದೆ..
ಸ್ಪೆಷಲ್ ಕ್ಲಾಸಲ್ಲಿ ಇದ್ದಾಗ ನಿನ್ನ
ವೀಡಿಯೋ ಕಾಲ್ ಗಳು ಹೃದಯದ
ಬಡಿತವನ್ನು ಹೆಚ್ಚಿಸುತ್ತಿದ್ದರೂ,ನಿನ್ನ
ಸ್ನೇಹಕ್ಕಾಗಿ ಸದಾ ಮನಸ್ಸು ಹಾತೊರೆಯುತ್ತಿತ್ತು….
ಇಂದಿನ ನಿನ್ನ ಬದಲಾವಣೆ ಗೆ ಕಾರಣ ತಿಳಿದಿಲ್ಲ, ಆದರೂ ಅರಿವಾದದ್ದೂ ಒಂದೇ
“ನೀನೊಬ್ಬ ಒಳ್ಳೆಯ ಹುಡುಗ”
ತಪ್ಪು ನನ್ನಿಂದಲೇ ಆಗಿರಬೇಕು….!
ತುರ್ತಿಗೆ ಇರಲಿ  ಅಂತ
ಅವತ್ತು ನಿನ್ನ ನಂಬರ್ ಪಡಕೊಂಡಾಗ ನಾನು ವಿಶೇಷವೆಂದು ಪರಿಗಣಿಸಲಿಲ್ಲ..
ನಿನಗೆ ನನ್ನ ಸ್ನೇಹ ಬೇಡವೆಂದು ಅರಿವಾದದ್ದು ಮೊನ್ನೆ…
ಮೆಸೇಜ್ ನೋಡಿದಾಗಲೂ ರಿಪ್ಲೈ ಇಲ್ಲದಾಗ!
ಶಾಂತ ಸಾಗರದಲ್ಲಿ ಸುನಾಮಿಯೇ ಎದ್ದಂತೆ..! ನನ್ನ ಹೃದಯ ಚೂರಾಯಿತು..
ಎಷ್ಟೋ ಬಾರಿ ನಿನ್ನ ಬೈಕ್ ನೊಡನೆ ಮಾತನಾಡುತಿದ್ದ ನನ್ನ ಮನ ನನ್ನೇ ನೋಡಿ ನಗುತ್ತಿದೆ…
ಮೊಬೈಲ್ ಪುಟದಲ್ಲೇ ಹೋದ ಆ ಜಾಲಿರೈಡ್,ನಡುರಾತ್ರಿಯ ವಾಕಿಂಗ್ ಚಂದ್ರನ ಬೆಳದಿಂಗಳ ನೆನಪು ಪದೇ ಪದೇ ಘಾಸಿಗೊಳಿಸುತ್ತಿದೆ…
ಗ್ರೌಂಡ್ ,ಪೆಟ್ರೋಲ್ ಪಂಪ್ ಕಾರಿಡಾರ್ ಮರದಮೇಲಿರುವ ಮಂಗ ನನ್ನನ್ನು ಅಣಕಿಸುತ್ತಿದೆ….
I AM UNLUCKY! ನಿನ್ನೊಳಗಿನ ಭಾವಗಳ ಗೌರವಿಸುವೆ …. ಬೇಕಿಲ್ಲ ಬೇರೇನು
ಮುಂದೊಮ್ಮೆ ನಿನ್ನ ಮೊಮ್ಮಕ್ಕಳನ್ನು
ಕೈ‌ ಹಿಡಿದು ನೀ ನಡೆಸುತ್ತಿರುವಾಗ
ಆಕಸ್ಮಿಕವಾಗಿ ನೀನು‌ನಾನು
ಎದುರುಬದುರಾದರೆ, ನನಗಾಗಿ
ಮತ್ತೊಮ್ಮೆ ಪರಿಚಯದ ನಗುವ ಬೀರು
ಸಾವಿರ ವ್ಯಾಟ್ ದೀಪದ ಕಾಂತಿಯ‌ ಕಂಡು ಕಣ್ಣುಮುಚ್ಚಿ ಬಿಡುವೆ…..
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

5 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

13 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

13 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

14 hours ago