Advertisement
ಅನುಕ್ರಮ

ಹಚ್ಚ ಹಸಿರಿನ ನೆನಪುಗಳು

Share
ಗುಳಿಗೆನ್ನೆಯ ಗೆಳೆಯ,
ನನ್ನೊಳಗೆ ನೀನಿದ್ದೆ ಎಂದು ತಿಳಿಯುವಾಗ ಬಲು ತಡವಾಯಿತು.
ಕಾರಿಡಾರಲ್ಲಿ ನಿಂತಾಗ,ನನಗಾಗಿ
ನಗು ಚೆಲ್ಲುತ್ತಿದ್ದಾಗ ,ನಿನ್ನ ಮೊಗದ ಕಾಂತಿ,
ಸಾವಿರ ವ್ಯಾಟ್ ದೀಪದಂತೆ ಬೆಳಗುತ್ತಿತ್ತು.
ಕತ್ತಲೆಯ ಭಯವ ನಿನ್ನೊಂದಿಗೆ ಹಂಚಿಕೊಂಡಾಗ, ನೀ‌ ನಿನ್ನ
ಕೆಲಸವ ಬಿಟ್ಟು ನನಗಾಗಿ ನಿಂತಾಗ
ನಿನ್ನ ಹೃದಯ ಮಂದಿರದಲ್ಲಿ ನನಗಾಗಿ
ಸ್ನೇಹದ ಸಿಂಹಾಸನವನ್ನೇ ಮೀಸಲಿಟ್ಟಿರುವೆ ಎಂದು ಭಾವಿಸಿದ್ದೆ!
ಮರದ ಮೇಲೆ ಮಂಗಗಳನ್ನು ಕಂಡಾಗಲೆಲ್ಲಾ ನಿನ್ನ ತುಂಟಾಟವ ಅವುಗಳಲ್ಲಿ‌ ಹುಡುಕುತ್ತಿದ್ದೆ..
ಸ್ಪೆಷಲ್ ಕ್ಲಾಸಲ್ಲಿ ಇದ್ದಾಗ ನಿನ್ನ
ವೀಡಿಯೋ ಕಾಲ್ ಗಳು ಹೃದಯದ
ಬಡಿತವನ್ನು ಹೆಚ್ಚಿಸುತ್ತಿದ್ದರೂ,ನಿನ್ನ
ಸ್ನೇಹಕ್ಕಾಗಿ ಸದಾ ಮನಸ್ಸು ಹಾತೊರೆಯುತ್ತಿತ್ತು….
ಇಂದಿನ ನಿನ್ನ ಬದಲಾವಣೆ ಗೆ ಕಾರಣ ತಿಳಿದಿಲ್ಲ, ಆದರೂ ಅರಿವಾದದ್ದೂ ಒಂದೇ
“ನೀನೊಬ್ಬ ಒಳ್ಳೆಯ ಹುಡುಗ”
ತಪ್ಪು ನನ್ನಿಂದಲೇ ಆಗಿರಬೇಕು….!
ತುರ್ತಿಗೆ ಇರಲಿ  ಅಂತ
ಅವತ್ತು ನಿನ್ನ ನಂಬರ್ ಪಡಕೊಂಡಾಗ ನಾನು ವಿಶೇಷವೆಂದು ಪರಿಗಣಿಸಲಿಲ್ಲ..
ನಿನಗೆ ನನ್ನ ಸ್ನೇಹ ಬೇಡವೆಂದು ಅರಿವಾದದ್ದು ಮೊನ್ನೆ…
ಮೆಸೇಜ್ ನೋಡಿದಾಗಲೂ ರಿಪ್ಲೈ ಇಲ್ಲದಾಗ!
ಶಾಂತ ಸಾಗರದಲ್ಲಿ ಸುನಾಮಿಯೇ ಎದ್ದಂತೆ..! ನನ್ನ ಹೃದಯ ಚೂರಾಯಿತು..
ಎಷ್ಟೋ ಬಾರಿ ನಿನ್ನ ಬೈಕ್ ನೊಡನೆ ಮಾತನಾಡುತಿದ್ದ ನನ್ನ ಮನ ನನ್ನೇ ನೋಡಿ ನಗುತ್ತಿದೆ…
ಮೊಬೈಲ್ ಪುಟದಲ್ಲೇ ಹೋದ ಆ ಜಾಲಿರೈಡ್,ನಡುರಾತ್ರಿಯ ವಾಕಿಂಗ್ ಚಂದ್ರನ ಬೆಳದಿಂಗಳ ನೆನಪು ಪದೇ ಪದೇ ಘಾಸಿಗೊಳಿಸುತ್ತಿದೆ…
ಗ್ರೌಂಡ್ ,ಪೆಟ್ರೋಲ್ ಪಂಪ್ ಕಾರಿಡಾರ್ ಮರದಮೇಲಿರುವ ಮಂಗ ನನ್ನನ್ನು ಅಣಕಿಸುತ್ತಿದೆ….
I AM UNLUCKY! ನಿನ್ನೊಳಗಿನ ಭಾವಗಳ ಗೌರವಿಸುವೆ …. ಬೇಕಿಲ್ಲ ಬೇರೇನು
ಮುಂದೊಮ್ಮೆ ನಿನ್ನ ಮೊಮ್ಮಕ್ಕಳನ್ನು
ಕೈ‌ ಹಿಡಿದು ನೀ ನಡೆಸುತ್ತಿರುವಾಗ
ಆಕಸ್ಮಿಕವಾಗಿ ನೀನು‌ನಾನು
ಎದುರುಬದುರಾದರೆ, ನನಗಾಗಿ
ಮತ್ತೊಮ್ಮೆ ಪರಿಚಯದ ನಗುವ ಬೀರು
ಸಾವಿರ ವ್ಯಾಟ್ ದೀಪದ ಕಾಂತಿಯ‌ ಕಂಡು ಕಣ್ಣುಮುಚ್ಚಿ ಬಿಡುವೆ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

22 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago