Advertisement
ಅನುಕ್ರಮ

ಹಚ್ಚ ಹಸಿರಿನ ನೆನಪುಗಳು

Share
ಗುಳಿಗೆನ್ನೆಯ ಗೆಳೆಯ,
ನನ್ನೊಳಗೆ ನೀನಿದ್ದೆ ಎಂದು ತಿಳಿಯುವಾಗ ಬಲು ತಡವಾಯಿತು.
ಕಾರಿಡಾರಲ್ಲಿ ನಿಂತಾಗ,ನನಗಾಗಿ
ನಗು ಚೆಲ್ಲುತ್ತಿದ್ದಾಗ ,ನಿನ್ನ ಮೊಗದ ಕಾಂತಿ,
ಸಾವಿರ ವ್ಯಾಟ್ ದೀಪದಂತೆ ಬೆಳಗುತ್ತಿತ್ತು.
ಕತ್ತಲೆಯ ಭಯವ ನಿನ್ನೊಂದಿಗೆ ಹಂಚಿಕೊಂಡಾಗ, ನೀ‌ ನಿನ್ನ
ಕೆಲಸವ ಬಿಟ್ಟು ನನಗಾಗಿ ನಿಂತಾಗ
ನಿನ್ನ ಹೃದಯ ಮಂದಿರದಲ್ಲಿ ನನಗಾಗಿ
ಸ್ನೇಹದ ಸಿಂಹಾಸನವನ್ನೇ ಮೀಸಲಿಟ್ಟಿರುವೆ ಎಂದು ಭಾವಿಸಿದ್ದೆ!
ಮರದ ಮೇಲೆ ಮಂಗಗಳನ್ನು ಕಂಡಾಗಲೆಲ್ಲಾ ನಿನ್ನ ತುಂಟಾಟವ ಅವುಗಳಲ್ಲಿ‌ ಹುಡುಕುತ್ತಿದ್ದೆ..
ಸ್ಪೆಷಲ್ ಕ್ಲಾಸಲ್ಲಿ ಇದ್ದಾಗ ನಿನ್ನ
ವೀಡಿಯೋ ಕಾಲ್ ಗಳು ಹೃದಯದ
ಬಡಿತವನ್ನು ಹೆಚ್ಚಿಸುತ್ತಿದ್ದರೂ,ನಿನ್ನ
ಸ್ನೇಹಕ್ಕಾಗಿ ಸದಾ ಮನಸ್ಸು ಹಾತೊರೆಯುತ್ತಿತ್ತು….
ಇಂದಿನ ನಿನ್ನ ಬದಲಾವಣೆ ಗೆ ಕಾರಣ ತಿಳಿದಿಲ್ಲ, ಆದರೂ ಅರಿವಾದದ್ದೂ ಒಂದೇ
“ನೀನೊಬ್ಬ ಒಳ್ಳೆಯ ಹುಡುಗ”
ತಪ್ಪು ನನ್ನಿಂದಲೇ ಆಗಿರಬೇಕು….!
ತುರ್ತಿಗೆ ಇರಲಿ  ಅಂತ
ಅವತ್ತು ನಿನ್ನ ನಂಬರ್ ಪಡಕೊಂಡಾಗ ನಾನು ವಿಶೇಷವೆಂದು ಪರಿಗಣಿಸಲಿಲ್ಲ..
ನಿನಗೆ ನನ್ನ ಸ್ನೇಹ ಬೇಡವೆಂದು ಅರಿವಾದದ್ದು ಮೊನ್ನೆ…
ಮೆಸೇಜ್ ನೋಡಿದಾಗಲೂ ರಿಪ್ಲೈ ಇಲ್ಲದಾಗ!
ಶಾಂತ ಸಾಗರದಲ್ಲಿ ಸುನಾಮಿಯೇ ಎದ್ದಂತೆ..! ನನ್ನ ಹೃದಯ ಚೂರಾಯಿತು..
ಎಷ್ಟೋ ಬಾರಿ ನಿನ್ನ ಬೈಕ್ ನೊಡನೆ ಮಾತನಾಡುತಿದ್ದ ನನ್ನ ಮನ ನನ್ನೇ ನೋಡಿ ನಗುತ್ತಿದೆ…
ಮೊಬೈಲ್ ಪುಟದಲ್ಲೇ ಹೋದ ಆ ಜಾಲಿರೈಡ್,ನಡುರಾತ್ರಿಯ ವಾಕಿಂಗ್ ಚಂದ್ರನ ಬೆಳದಿಂಗಳ ನೆನಪು ಪದೇ ಪದೇ ಘಾಸಿಗೊಳಿಸುತ್ತಿದೆ…
ಗ್ರೌಂಡ್ ,ಪೆಟ್ರೋಲ್ ಪಂಪ್ ಕಾರಿಡಾರ್ ಮರದಮೇಲಿರುವ ಮಂಗ ನನ್ನನ್ನು ಅಣಕಿಸುತ್ತಿದೆ….
I AM UNLUCKY! ನಿನ್ನೊಳಗಿನ ಭಾವಗಳ ಗೌರವಿಸುವೆ …. ಬೇಕಿಲ್ಲ ಬೇರೇನು
ಮುಂದೊಮ್ಮೆ ನಿನ್ನ ಮೊಮ್ಮಕ್ಕಳನ್ನು
ಕೈ‌ ಹಿಡಿದು ನೀ ನಡೆಸುತ್ತಿರುವಾಗ
ಆಕಸ್ಮಿಕವಾಗಿ ನೀನು‌ನಾನು
ಎದುರುಬದುರಾದರೆ, ನನಗಾಗಿ
ಮತ್ತೊಮ್ಮೆ ಪರಿಚಯದ ನಗುವ ಬೀರು
ಸಾವಿರ ವ್ಯಾಟ್ ದೀಪದ ಕಾಂತಿಯ‌ ಕಂಡು ಕಣ್ಣುಮುಚ್ಚಿ ಬಿಡುವೆ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

15 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

22 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

22 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago