Advertisement
ಅನುಕ್ರಮ

ಹಚ್ಚ ಹಸಿರಿನ ನೆನಪುಗಳು

Share
ಗುಳಿಗೆನ್ನೆಯ ಗೆಳೆಯ,
ನನ್ನೊಳಗೆ ನೀನಿದ್ದೆ ಎಂದು ತಿಳಿಯುವಾಗ ಬಲು ತಡವಾಯಿತು.
ಕಾರಿಡಾರಲ್ಲಿ ನಿಂತಾಗ,ನನಗಾಗಿ
ನಗು ಚೆಲ್ಲುತ್ತಿದ್ದಾಗ ,ನಿನ್ನ ಮೊಗದ ಕಾಂತಿ,
ಸಾವಿರ ವ್ಯಾಟ್ ದೀಪದಂತೆ ಬೆಳಗುತ್ತಿತ್ತು.
ಕತ್ತಲೆಯ ಭಯವ ನಿನ್ನೊಂದಿಗೆ ಹಂಚಿಕೊಂಡಾಗ, ನೀ‌ ನಿನ್ನ
ಕೆಲಸವ ಬಿಟ್ಟು ನನಗಾಗಿ ನಿಂತಾಗ
ನಿನ್ನ ಹೃದಯ ಮಂದಿರದಲ್ಲಿ ನನಗಾಗಿ
ಸ್ನೇಹದ ಸಿಂಹಾಸನವನ್ನೇ ಮೀಸಲಿಟ್ಟಿರುವೆ ಎಂದು ಭಾವಿಸಿದ್ದೆ!
ಮರದ ಮೇಲೆ ಮಂಗಗಳನ್ನು ಕಂಡಾಗಲೆಲ್ಲಾ ನಿನ್ನ ತುಂಟಾಟವ ಅವುಗಳಲ್ಲಿ‌ ಹುಡುಕುತ್ತಿದ್ದೆ..
ಸ್ಪೆಷಲ್ ಕ್ಲಾಸಲ್ಲಿ ಇದ್ದಾಗ ನಿನ್ನ
ವೀಡಿಯೋ ಕಾಲ್ ಗಳು ಹೃದಯದ
ಬಡಿತವನ್ನು ಹೆಚ್ಚಿಸುತ್ತಿದ್ದರೂ,ನಿನ್ನ
ಸ್ನೇಹಕ್ಕಾಗಿ ಸದಾ ಮನಸ್ಸು ಹಾತೊರೆಯುತ್ತಿತ್ತು….
ಇಂದಿನ ನಿನ್ನ ಬದಲಾವಣೆ ಗೆ ಕಾರಣ ತಿಳಿದಿಲ್ಲ, ಆದರೂ ಅರಿವಾದದ್ದೂ ಒಂದೇ
“ನೀನೊಬ್ಬ ಒಳ್ಳೆಯ ಹುಡುಗ”
ತಪ್ಪು ನನ್ನಿಂದಲೇ ಆಗಿರಬೇಕು….!
ತುರ್ತಿಗೆ ಇರಲಿ  ಅಂತ
ಅವತ್ತು ನಿನ್ನ ನಂಬರ್ ಪಡಕೊಂಡಾಗ ನಾನು ವಿಶೇಷವೆಂದು ಪರಿಗಣಿಸಲಿಲ್ಲ..
ನಿನಗೆ ನನ್ನ ಸ್ನೇಹ ಬೇಡವೆಂದು ಅರಿವಾದದ್ದು ಮೊನ್ನೆ…
ಮೆಸೇಜ್ ನೋಡಿದಾಗಲೂ ರಿಪ್ಲೈ ಇಲ್ಲದಾಗ!
ಶಾಂತ ಸಾಗರದಲ್ಲಿ ಸುನಾಮಿಯೇ ಎದ್ದಂತೆ..! ನನ್ನ ಹೃದಯ ಚೂರಾಯಿತು..
ಎಷ್ಟೋ ಬಾರಿ ನಿನ್ನ ಬೈಕ್ ನೊಡನೆ ಮಾತನಾಡುತಿದ್ದ ನನ್ನ ಮನ ನನ್ನೇ ನೋಡಿ ನಗುತ್ತಿದೆ…
ಮೊಬೈಲ್ ಪುಟದಲ್ಲೇ ಹೋದ ಆ ಜಾಲಿರೈಡ್,ನಡುರಾತ್ರಿಯ ವಾಕಿಂಗ್ ಚಂದ್ರನ ಬೆಳದಿಂಗಳ ನೆನಪು ಪದೇ ಪದೇ ಘಾಸಿಗೊಳಿಸುತ್ತಿದೆ…
ಗ್ರೌಂಡ್ ,ಪೆಟ್ರೋಲ್ ಪಂಪ್ ಕಾರಿಡಾರ್ ಮರದಮೇಲಿರುವ ಮಂಗ ನನ್ನನ್ನು ಅಣಕಿಸುತ್ತಿದೆ….
I AM UNLUCKY! ನಿನ್ನೊಳಗಿನ ಭಾವಗಳ ಗೌರವಿಸುವೆ …. ಬೇಕಿಲ್ಲ ಬೇರೇನು
ಮುಂದೊಮ್ಮೆ ನಿನ್ನ ಮೊಮ್ಮಕ್ಕಳನ್ನು
ಕೈ‌ ಹಿಡಿದು ನೀ ನಡೆಸುತ್ತಿರುವಾಗ
ಆಕಸ್ಮಿಕವಾಗಿ ನೀನು‌ನಾನು
ಎದುರುಬದುರಾದರೆ, ನನಗಾಗಿ
ಮತ್ತೊಮ್ಮೆ ಪರಿಚಯದ ನಗುವ ಬೀರು
ಸಾವಿರ ವ್ಯಾಟ್ ದೀಪದ ಕಾಂತಿಯ‌ ಕಂಡು ಕಣ್ಣುಮುಚ್ಚಿ ಬಿಡುವೆ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

6 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

14 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

21 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago