ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

July 17, 2019
3:30 PM

ಕಡಬ :  ಕಡಬ ತಾಲೂಕು ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿದ್ಯಾಲಯದ ವಿದ್ಯಾಥರ್ಿಗಳು ಕಡಬದ ನಾರಾಯಣ ಗೌಡ ಸಂಕೇಶ  ಗದ್ದೆಯಲ್ಲಿ  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.
ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಕೃಷಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಪದ್ದತಿ ನಮ್ಮ ಹಿರಿಯ ಬಳುವಳಿ. ಇದನ್ನು ಮುಂದುವರಿಸಿವುದು ನಮ್ಮೆಲ್ಲರ ಕರ್ತವ್ಯ.  ಜೀವನದಲ್ಲಿ ಸ್ವಾವಲಂಬಿಯಾಗಿ ಬದುಕಲು ಕೃಷಿ ಸಹಕಾರಿಯಾಗಿದೆ ಈ ನಿಟ್ಟನಲ್ಲಿ ವಿದ್ಯಾವಂತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಿಂದಲೇ ರೈತರ ಪರಿಶ್ರಮದ ಬಗ್ಗೆ ಅರಿವು ಪಡೆದು ಭವಿಷ್ಯದಲ್ಲಿ ಕೃಷಿ ಕಾಯಕವನ್ನು ಮುಂದುವರಿಸಬೇಕೆಂದರು.

ಆಡಳಿತ ಮಂಡಳಿಯ ನಿರ್ದೇಶಕ   ಉಮೇಶ್ ಶೆಟ್ಟಿ ಸಾಯಿರಾಂ ಮಾತನಾಡಿ,  ಭತ್ತದ ಕೃಷಿಯಿಂದ ಈ ಮಣ್ಣಿನ ಜೊತೆಗಿನ ಒಡನಾಟ ಸಾಧ್ಯ. ಅದು ಚಿಕಿತ್ಸಕ ರೀತಿಯಲ್ಲಿ ದೇಹದ ಮೇಲೆ ಉತ್ತಮ ಪರಿಣಾಮ ಬೀರಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಜೊತೆಗೆ ಗದ್ದೆ ಇದ್ದಲ್ಲಿ ನೀರಿನ ಅಭಾವ ಕಡಿಮೆ ಎಂದು ಅಭಿಪ್ರಾಯಪಟ್ಟರು.

ಕೃಷಿ ಚಟುವಟಿಕೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್, ಪದವಿಪೂರ್ವ ವಿಭಾಗದ ಮುಖ್ಯಸ್ಥ ಮಹೇಶ್ ನಿಟಿಲಾಪುರ, ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ಶೈಲಶ್ರೀ ರೈ, ಕೃಷಿಕ ನಾರಾಯಣ ಗೌಡ ಸಂಕೇಶ, ಉಪನ್ಯಾಸಕವೃಂದ, ಶಿಕ್ಷಕವೃಂದ, ವಿದ್ಯಾರ್ಥಿಗಳು  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.

ಕಾಲೇಜಿನ ಪಕ್ಕದಲ್ಲಿರುವ ಹಡಿಲು ಬಿದ್ದ ಸುಮಾರ 60 ಸೆಂಟ್ಸ್ ಭತ್ತದ ಗದ್ದೆಯಲ್ಲಿ  ಈ ವರ್ಷದಿಂದ  ಭತ್ತದ  ನಾಟಿ ಮಾಡಲು ಪ್ರಾರಂಭಿಸಲಾಗಿದೆ.   ಕಟಾವು ಮಾಡುವವರೆಗಿನ ಎಲ್ಲಾ ಪ್ರಕ್ರಿಯೆ ಶಾಲಾ ವಿದ್ಯಾರ್ಥಿಗಳೇ ಮಾಡಲಿದ್ದಾರೆ. ಇಲ್ಲಿ ಬೆಳೆಯಲಾದ ಅಕ್ಕಿಯನ್ನು ಶಾಲಾ ಬಿಸಿಯೂಟಕ್ಕೆ ಉಪಯೋಗಿಸಿಕೊಳ್ಳಲಾಗುವುದು. ಭತ್ತದ ಕೃಷಿಯ ಪ್ರಾಯೋಗಿಕ ಪಾಠ ಮತ್ತು ಕೃಷಿಯತ್ತ ಆಸಕ್ತಿ ಮೂಡಿಸಲು, ರೈತರ ಕಷ್ಟ ಅರಿಯಲು ಇಂತಹ ಕಾರ್ಯಕ್ರಮದಿಂದ ಸಾಧ್ಯ.-  ಮಹೇಶ್ ನಿಟಲಾಪುರ , ಪ್ರಾಂಶುಪಾಲ ಸರಸ್ವತೀ ಪದವಿ ಪೂರ್ವ ವಿದ್ಯಾಲಯ,

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror