Advertisement
ಕೃಷಿ

ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

Share

ಕಡಬ :  ಕಡಬ ತಾಲೂಕು ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿದ್ಯಾಲಯದ ವಿದ್ಯಾಥರ್ಿಗಳು ಕಡಬದ ನಾರಾಯಣ ಗೌಡ ಸಂಕೇಶ  ಗದ್ದೆಯಲ್ಲಿ  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.
ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಕೃಷಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಪದ್ದತಿ ನಮ್ಮ ಹಿರಿಯ ಬಳುವಳಿ. ಇದನ್ನು ಮುಂದುವರಿಸಿವುದು ನಮ್ಮೆಲ್ಲರ ಕರ್ತವ್ಯ.  ಜೀವನದಲ್ಲಿ ಸ್ವಾವಲಂಬಿಯಾಗಿ ಬದುಕಲು ಕೃಷಿ ಸಹಕಾರಿಯಾಗಿದೆ ಈ ನಿಟ್ಟನಲ್ಲಿ ವಿದ್ಯಾವಂತರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಿಂದಲೇ ರೈತರ ಪರಿಶ್ರಮದ ಬಗ್ಗೆ ಅರಿವು ಪಡೆದು ಭವಿಷ್ಯದಲ್ಲಿ ಕೃಷಿ ಕಾಯಕವನ್ನು ಮುಂದುವರಿಸಬೇಕೆಂದರು.

ಆಡಳಿತ ಮಂಡಳಿಯ ನಿರ್ದೇಶಕ   ಉಮೇಶ್ ಶೆಟ್ಟಿ ಸಾಯಿರಾಂ ಮಾತನಾಡಿ,  ಭತ್ತದ ಕೃಷಿಯಿಂದ ಈ ಮಣ್ಣಿನ ಜೊತೆಗಿನ ಒಡನಾಟ ಸಾಧ್ಯ. ಅದು ಚಿಕಿತ್ಸಕ ರೀತಿಯಲ್ಲಿ ದೇಹದ ಮೇಲೆ ಉತ್ತಮ ಪರಿಣಾಮ ಬೀರಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಜೊತೆಗೆ ಗದ್ದೆ ಇದ್ದಲ್ಲಿ ನೀರಿನ ಅಭಾವ ಕಡಿಮೆ ಎಂದು ಅಭಿಪ್ರಾಯಪಟ್ಟರು.

ಕೃಷಿ ಚಟುವಟಿಕೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್, ಪದವಿಪೂರ್ವ ವಿಭಾಗದ ಮುಖ್ಯಸ್ಥ ಮಹೇಶ್ ನಿಟಿಲಾಪುರ, ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ಶೈಲಶ್ರೀ ರೈ, ಕೃಷಿಕ ನಾರಾಯಣ ಗೌಡ ಸಂಕೇಶ, ಉಪನ್ಯಾಸಕವೃಂದ, ಶಿಕ್ಷಕವೃಂದ, ವಿದ್ಯಾರ್ಥಿಗಳು  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು.

ಕಾಲೇಜಿನ ಪಕ್ಕದಲ್ಲಿರುವ ಹಡಿಲು ಬಿದ್ದ ಸುಮಾರ 60 ಸೆಂಟ್ಸ್ ಭತ್ತದ ಗದ್ದೆಯಲ್ಲಿ  ಈ ವರ್ಷದಿಂದ  ಭತ್ತದ  ನಾಟಿ ಮಾಡಲು ಪ್ರಾರಂಭಿಸಲಾಗಿದೆ.   ಕಟಾವು ಮಾಡುವವರೆಗಿನ ಎಲ್ಲಾ ಪ್ರಕ್ರಿಯೆ ಶಾಲಾ ವಿದ್ಯಾರ್ಥಿಗಳೇ ಮಾಡಲಿದ್ದಾರೆ. ಇಲ್ಲಿ ಬೆಳೆಯಲಾದ ಅಕ್ಕಿಯನ್ನು ಶಾಲಾ ಬಿಸಿಯೂಟಕ್ಕೆ ಉಪಯೋಗಿಸಿಕೊಳ್ಳಲಾಗುವುದು. ಭತ್ತದ ಕೃಷಿಯ ಪ್ರಾಯೋಗಿಕ ಪಾಠ ಮತ್ತು ಕೃಷಿಯತ್ತ ಆಸಕ್ತಿ ಮೂಡಿಸಲು, ರೈತರ ಕಷ್ಟ ಅರಿಯಲು ಇಂತಹ ಕಾರ್ಯಕ್ರಮದಿಂದ ಸಾಧ್ಯ.-  ಮಹೇಶ್ ನಿಟಲಾಪುರ , ಪ್ರಾಂಶುಪಾಲ ಸರಸ್ವತೀ ಪದವಿ ಪೂರ್ವ ವಿದ್ಯಾಲಯ,

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago