ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…