ಸುದ್ದಿಗಳು

ಹಣ ಪಾವತಿಯಲ್ಲಿ ವಿಳಂಬ : ಕ್ಯಾಂಪ್ಕೋ ವಿಷಾದ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು  ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.  ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

5 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

5 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

5 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

5 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

19 hours ago