ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…