ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…