Advertisement
ಸುದ್ದಿಗಳು

ಹಣ ಪಾವತಿಯಲ್ಲಿ ವಿಳಂಬ : ಕ್ಯಾಂಪ್ಕೋ ವಿಷಾದ

Share

ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು  ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.  ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

15 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

24 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago