Advertisement
ಸುದ್ದಿಗಳು

ಹಣ ಪಾವತಿಯಲ್ಲಿ ವಿಳಂಬ : ಕ್ಯಾಂಪ್ಕೋ ವಿಷಾದ

Share

ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು  ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.  ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

5 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago