Advertisement
ಸುದ್ದಿಗಳು

ಹದಗೆಟ್ಟ ಪೇಜಾವರ ಶ್ರೀಗಳ ಆರೋಗ್ಯ : ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ : ಮಠದಲ್ಲಿ ವಿಷ್ಣುಸಹಸ್ರನಾಮ ಪಾರಾಯಣ

Share

ಉಡುಪಿ: ಪೇವಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಪೇಜಾವರ ಸ್ವಾಮೀಜಿಯನ್ನು ಇಂದು ಬೆಳಗ್ಗೆ 6:55ರ ಸುಮಾರಿಗೆ ಉಡುಪಿ ಪೇಜಾವರ ಮಠಕ್ಕೆ ಸ್ಥಳಾಂತರಿಸಲಾಯಿತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಡಿ. 20ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಆದರೆ ಈವರೆಗೆ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಾಗೂ ಶನಿವಾರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಬಳಿಕ ಗಳ ಶ್ರೀಗಳ ಕೊನೆಯಾಸೆಯಂತೆ ಅವರನ್ನು ಆದಿತ್ಯವಾರ ಬೆಳಗ್ಗಿನ ಜಾವ ಮಠಕ್ಕೆ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಪೇಜಾವರ ಮಠದ ಕಿರಿಯ ಶ್ರೀಗಳು ಹೇಳಿದ್ದಾರೆ. ಮಠದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು ಅಲ್ಲದೇ ಮಠಕ್ಕೆ ಭಕ್ತರ ಪ್ರವೇಶವನ್ನ ನಿರ್ಬಂಧಿಸ ಲಾಗುವುದು ಎಂದು ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗಳು ತಿಳಿಸಿದ್ದಾರೆ.

ಇದೀಗ ಮಠಕ್ಕೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ವೈದ್ಯರನ್ನೊಳಗೊಂಡ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಉಡುಪಿಯಲ್ಲಿದ್ದು ಶ್ರೀಗಳ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸುತ್ತಿದ್ದಾರೆ. ಪೇಜಾವರ ಶ್ರೀಗಳಿಂದಲೇ ಸನ್ಯಾಸ ದೀಕ್ಷೆ ಪಡೆದಿದ್ದ ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರು ಒಂದು ವಾರದಿಂದ ಉಡುಪಿಯಲ್ಲೇ ಇದ್ದು ಶ್ರೀಗಳ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವಿವಿಧ ಮಠಗಳ ಶ್ರೀಗಳು ಆಗಮಿಸಿದ್ದು, ಪೇಜಾವರ ಮಠದಲ್ಲಿ  ಭಕ್ತರು ಹಾಗೂ ಯತಿಗಳು ವಿಷ್ಣುಸಹಸ್ರನಾಮ ಪಾರಾಯಣ ಮಾಡುತ್ತಿದ್ದಾರೆ. ಪೇಜಾವರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

6 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

6 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

6 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

13 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago