Advertisement
ಸುದ್ದಿಗಳು

ಹಬ್ಬ ಹರಿದಿನಗಳ ಆಚರಣೆ ಸಾರ್ವಜನಿಕ ಸಂಕಲನಕ್ಕೆ ಸಹಕಾರಿ

Share

ಆಲಂಕಾರು: ಕಡಬ ಅಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಮಾಧವ ಸದನದಲ್ಲಿ  ವರಮಹಾಲಕ್ಷ್ಮೀ ಹಬ್ಬದ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ,ಸಾಹಿತಿ,ವೈದ್ಯ ಡಾ ಸುರೇಶ ನೆಗಳಗುಳಿ ಮಾತನಾಡಿ ” ವರ ಮಹಾಲಕ್ಷ್ಮಿ ವ್ರತದ ಮಹತ್ವ, ಅದರ ಪೌರಾಣಿಕ ಹಿನ್ನೆಲೆ ಹಾಗೂ ಆರೋಗ್ಯದ ಸಂಪತ್ತು ಪ್ರಾಪ್ತ ವಾಗುವ ಉಪಾಯಗಳು ಹಾಗೂ ದೇವಿ ಲಕ್ಷ್ಮಿ ಯ ಪಾತ್ರವನ್ನು ವರ್ಣಿಸಿದರಲ್ಲದೆ, ಲಕ್ಷ್ಮಿ ದೇವಿಯ ಹಲವಾರು ನಾಮ ಹಾಗೂ ಅರ್ಥವನ್ನೊಳ ಗೊಂಡ ಸ್ವರಚಿತ ಕವನವನ್ನು ಧಾರ್ಮಿಕ ಉಪಾನ್ಯಾಸಕ ರಾಗಿ ವಾಚಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಮೈಸೂರಿನಲ್ಲಿರುವ ವಿಶ್ವಪ್ರಸಾದ್ ಆಳ್ವರವರು ಮಾಂಸಾಹಾರ ವರ್ಜ್ಯ  ಮಾಡುವ ಉದ್ದೇಶ ಹಾಗೂ ಅದು ಹೇಗೆ ಜನಸಂಕುಲದ ಸಂಸ್ಕಾರವನ್ನು ಪರಿವರ್ತಿಸ ಬಲ್ಲದು ಎಂದು ವಿವರಿಸಿದರು.
ಅಧ್ಯಕ್ಷರಾಗಿ ಶಾಲಾ ಸಂಚಾಲಕ  ಶ್ರೀಕೃಷ್ಣ ಕುಮಾರ್ ಇವರು ಶಿಸ್ತುಬದ್ಧ ನೀತಿಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮ ಸಂಸ್ಥೆ ನಿಗಾ ವಹಿಸುವುದಲ್ಲದೆ ಇಂತಹ ಹಬ್ಬ ಹರಿದಿನಗಳ ಆಚರಣೆ ಹಲವಾರು ವರ್ಷಗಳಿಂದಲೂ ನಡೆಸುತ್ತಿದ್ದು , ಉತ್ತಮ ಶಿಕ್ಷಣವೇ ತಮ್ಮ ಗುರಿ ಎಂದರು.

ಡಾ ಸುರೇಶ್ ಕೂಡೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಶಾ ಎಸ್ ರೈ ಮತ್ತು ಚಂದ್ರಹಾಸ ನಿರೂಪಿಸಿದರು. ಭವಾನಿ ವಂದಿಸಿದರು.ವೇದಿಕೆಯಲ್ಲಿ ಅರ್ಚಕ ವೇದಮೂರ್ತಿ ಅನಂತರಾಮ ಶರವೂರು ಮತ್ತು ಕನಕಲತಾ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

10 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

10 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

10 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

20 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

21 hours ago