Advertisement
ಸುದ್ದಿಗಳು

ಹಬ್ಬ ಹರಿದಿನಗಳ ಆಚರಣೆ ಸಾರ್ವಜನಿಕ ಸಂಕಲನಕ್ಕೆ ಸಹಕಾರಿ

Share

ಆಲಂಕಾರು: ಕಡಬ ಅಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಮಾಧವ ಸದನದಲ್ಲಿ  ವರಮಹಾಲಕ್ಷ್ಮೀ ಹಬ್ಬದ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ,ಸಾಹಿತಿ,ವೈದ್ಯ ಡಾ ಸುರೇಶ ನೆಗಳಗುಳಿ ಮಾತನಾಡಿ ” ವರ ಮಹಾಲಕ್ಷ್ಮಿ ವ್ರತದ ಮಹತ್ವ, ಅದರ ಪೌರಾಣಿಕ ಹಿನ್ನೆಲೆ ಹಾಗೂ ಆರೋಗ್ಯದ ಸಂಪತ್ತು ಪ್ರಾಪ್ತ ವಾಗುವ ಉಪಾಯಗಳು ಹಾಗೂ ದೇವಿ ಲಕ್ಷ್ಮಿ ಯ ಪಾತ್ರವನ್ನು ವರ್ಣಿಸಿದರಲ್ಲದೆ, ಲಕ್ಷ್ಮಿ ದೇವಿಯ ಹಲವಾರು ನಾಮ ಹಾಗೂ ಅರ್ಥವನ್ನೊಳ ಗೊಂಡ ಸ್ವರಚಿತ ಕವನವನ್ನು ಧಾರ್ಮಿಕ ಉಪಾನ್ಯಾಸಕ ರಾಗಿ ವಾಚಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಮೈಸೂರಿನಲ್ಲಿರುವ ವಿಶ್ವಪ್ರಸಾದ್ ಆಳ್ವರವರು ಮಾಂಸಾಹಾರ ವರ್ಜ್ಯ  ಮಾಡುವ ಉದ್ದೇಶ ಹಾಗೂ ಅದು ಹೇಗೆ ಜನಸಂಕುಲದ ಸಂಸ್ಕಾರವನ್ನು ಪರಿವರ್ತಿಸ ಬಲ್ಲದು ಎಂದು ವಿವರಿಸಿದರು.
ಅಧ್ಯಕ್ಷರಾಗಿ ಶಾಲಾ ಸಂಚಾಲಕ  ಶ್ರೀಕೃಷ್ಣ ಕುಮಾರ್ ಇವರು ಶಿಸ್ತುಬದ್ಧ ನೀತಿಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮ ಸಂಸ್ಥೆ ನಿಗಾ ವಹಿಸುವುದಲ್ಲದೆ ಇಂತಹ ಹಬ್ಬ ಹರಿದಿನಗಳ ಆಚರಣೆ ಹಲವಾರು ವರ್ಷಗಳಿಂದಲೂ ನಡೆಸುತ್ತಿದ್ದು , ಉತ್ತಮ ಶಿಕ್ಷಣವೇ ತಮ್ಮ ಗುರಿ ಎಂದರು.

ಡಾ ಸುರೇಶ್ ಕೂಡೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಶಾ ಎಸ್ ರೈ ಮತ್ತು ಚಂದ್ರಹಾಸ ನಿರೂಪಿಸಿದರು. ಭವಾನಿ ವಂದಿಸಿದರು.ವೇದಿಕೆಯಲ್ಲಿ ಅರ್ಚಕ ವೇದಮೂರ್ತಿ ಅನಂತರಾಮ ಶರವೂರು ಮತ್ತು ಕನಕಲತಾ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

3 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

4 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago