Advertisement
ಸುದ್ದಿಗಳು

ಹಬ್ಬ ಹರಿದಿನಗಳ ಆಚರಣೆ ಸಾರ್ವಜನಿಕ ಸಂಕಲನಕ್ಕೆ ಸಹಕಾರಿ

Share

ಆಲಂಕಾರು: ಕಡಬ ಅಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಮಾಧವ ಸದನದಲ್ಲಿ  ವರಮಹಾಲಕ್ಷ್ಮೀ ಹಬ್ಬದ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ,ಸಾಹಿತಿ,ವೈದ್ಯ ಡಾ ಸುರೇಶ ನೆಗಳಗುಳಿ ಮಾತನಾಡಿ ” ವರ ಮಹಾಲಕ್ಷ್ಮಿ ವ್ರತದ ಮಹತ್ವ, ಅದರ ಪೌರಾಣಿಕ ಹಿನ್ನೆಲೆ ಹಾಗೂ ಆರೋಗ್ಯದ ಸಂಪತ್ತು ಪ್ರಾಪ್ತ ವಾಗುವ ಉಪಾಯಗಳು ಹಾಗೂ ದೇವಿ ಲಕ್ಷ್ಮಿ ಯ ಪಾತ್ರವನ್ನು ವರ್ಣಿಸಿದರಲ್ಲದೆ, ಲಕ್ಷ್ಮಿ ದೇವಿಯ ಹಲವಾರು ನಾಮ ಹಾಗೂ ಅರ್ಥವನ್ನೊಳ ಗೊಂಡ ಸ್ವರಚಿತ ಕವನವನ್ನು ಧಾರ್ಮಿಕ ಉಪಾನ್ಯಾಸಕ ರಾಗಿ ವಾಚಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಮೈಸೂರಿನಲ್ಲಿರುವ ವಿಶ್ವಪ್ರಸಾದ್ ಆಳ್ವರವರು ಮಾಂಸಾಹಾರ ವರ್ಜ್ಯ  ಮಾಡುವ ಉದ್ದೇಶ ಹಾಗೂ ಅದು ಹೇಗೆ ಜನಸಂಕುಲದ ಸಂಸ್ಕಾರವನ್ನು ಪರಿವರ್ತಿಸ ಬಲ್ಲದು ಎಂದು ವಿವರಿಸಿದರು.
ಅಧ್ಯಕ್ಷರಾಗಿ ಶಾಲಾ ಸಂಚಾಲಕ  ಶ್ರೀಕೃಷ್ಣ ಕುಮಾರ್ ಇವರು ಶಿಸ್ತುಬದ್ಧ ನೀತಿಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮ ಸಂಸ್ಥೆ ನಿಗಾ ವಹಿಸುವುದಲ್ಲದೆ ಇಂತಹ ಹಬ್ಬ ಹರಿದಿನಗಳ ಆಚರಣೆ ಹಲವಾರು ವರ್ಷಗಳಿಂದಲೂ ನಡೆಸುತ್ತಿದ್ದು , ಉತ್ತಮ ಶಿಕ್ಷಣವೇ ತಮ್ಮ ಗುರಿ ಎಂದರು.

ಡಾ ಸುರೇಶ್ ಕೂಡೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಶಾ ಎಸ್ ರೈ ಮತ್ತು ಚಂದ್ರಹಾಸ ನಿರೂಪಿಸಿದರು. ಭವಾನಿ ವಂದಿಸಿದರು.ವೇದಿಕೆಯಲ್ಲಿ ಅರ್ಚಕ ವೇದಮೂರ್ತಿ ಅನಂತರಾಮ ಶರವೂರು ಮತ್ತು ಕನಕಲತಾ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

35 minutes ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

56 minutes ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

11 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

11 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

17 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

17 hours ago