Advertisement
ಸುದ್ದಿಗಳು

ಹರಟೆ ವಿಷಯ ಹರಟೆಯೇ ಆಗದಿರಲಿ

Share

ಪುತ್ತೂರು: ಮಾತುಗಾರಿಕೆ ಎಂಬುದು ಒಂದು ಕಲೆ. ಈ ಕಲೆಯ ಮುಂದುವರಿದ ಭಾಗವೇ ಹರಟೆ. ಆದರೆ ಹರಟೆ ಎಂದರೆ ಕೇವಲ ಹಾಸ್ಯವಲ್ಲ. ಬದಲಾಗಿ ಅಲ್ಲಿ ಒಂದು ವಿಷಯದ ಕುರಿತು ಅರ್ಥಗರ್ಭಿತವಾದ ಚರ್ಚೆಯ ಮುಖಾಂತರ ವಿಮರ್ಶಿಸುವುದೇ ಹರಟೆ. ವಿಷಯ ರಹಿತವಾಗಿ ಮಾತನಾಡುವುದು ಹರಟೆಯಾಗುವುದಿಲ್ಲ. ಹರಟೆಯ ಮುಖೇನ ವಿಷಯದ ಕುರಿತ ಜ್ಞಾನವನ್ನು ವ್ಯಕ್ತಿಗೆ ಅಥವಾ ಸಮಾಜಕ್ಕೆ ನೀಡಿದಂತಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಾಣಿಜ್ಯ ಪದವಿ ವಿಭಾಗದ ಉಪನ್ಯಾಸಕಿ ರವಿಕಲಾ ಅಭಿಪ್ರಾಯಪಟ್ಟರು.

ಅವರು ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸಿದ “ಮಣಿಕರ್ಣಿಕಾ” ಮಾತುಗಾರರ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ವಿಷಯದ ಕುರಿತು ಮಾತನಾಡಿದರು. ಹರಟೆಯಲ್ಲಿ ಒಂದು ವಿಷಯದ ಕುರಿತು ನಗೆ ಚಟಾಕಿಯ ಮೂಲಕ ವಿಮರ್ಶೆ ನಡೆಸುವುದು. ಇದರಲ್ಲಿ ಔಪಚಾರಿಕ ಹಾಗೂ ಅನೌಪಚಾರಿಕ ಎಂಬುದಾಗಿ ಹರಟೆಯನ್ನು ವಿಂಗಡಿಸಬಹುದು. ವಿದ್ಯಾರ್ಥಿಗಳು ಮಾಡುವ ಚರ್ಚೆಗಳು ಸಾಮಾನ್ಯವಾಗಿ ಅನೌಪಚಾರಿಕವಾಗಿರುತ್ತದೆ. ಅದೇ ರೀತಿ ಮೊಬೈಲ್ ಮುಖೇನ ಇಂದು ವ್ಯಾಟ್ಸಪ್ ಮೂಲಕ ಮಾತನಾಡುವುದೂ ಒಂದು ರೀತಿಯ ಹರಟೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ದೊರೆತಿರುವ ಈ ವೇದಿಕೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಅಲ್ಲದೆ ವ್ಯಕ್ತಿತ್ವ ವಿಕಸನ ಆಗುವ ದೃಷ್ಟಿಯಿಂದ ಇದು ಸಹಕಾರಿ ಎಂದರು.
ತೃತೀಯ ಬಿಎ ವಿದ್ಯಾರ್ಥಿ ರಾಮಕಿಶನ್ ಕೆ.ವಿ. ವಾರದ ಮಾತುಗಾರ ಬಹುಮಾನ ಪಡೆದರು. ತೃತೀಯ ಬಿಎ ವಿದ್ಯಾರ್ಥಿಗಳು ವಾರದ ಮಾತುಗಾರರ ತಂಡ ಎಂಬ ಬಹುಮಾನ ಪಡೆಯಿತು.
ಪದವಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ, ವೇದಿಕೆಯ ಕಾರ್ಯದರ್ಶಿ ತೇಜಶ್ರೀ ವೆಂಕಟೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯಾ ವಂದಿಸಿದರು. ಕಾರ್ಯಕ್ರಮವನ್ನು ಜಯಶ್ರೀ ಎ. ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago