Advertisement
ಸುದ್ದಿಗಳು

ಹರಟೆ ವಿಷಯ ಹರಟೆಯೇ ಆಗದಿರಲಿ

Share

ಪುತ್ತೂರು: ಮಾತುಗಾರಿಕೆ ಎಂಬುದು ಒಂದು ಕಲೆ. ಈ ಕಲೆಯ ಮುಂದುವರಿದ ಭಾಗವೇ ಹರಟೆ. ಆದರೆ ಹರಟೆ ಎಂದರೆ ಕೇವಲ ಹಾಸ್ಯವಲ್ಲ. ಬದಲಾಗಿ ಅಲ್ಲಿ ಒಂದು ವಿಷಯದ ಕುರಿತು ಅರ್ಥಗರ್ಭಿತವಾದ ಚರ್ಚೆಯ ಮುಖಾಂತರ ವಿಮರ್ಶಿಸುವುದೇ ಹರಟೆ. ವಿಷಯ ರಹಿತವಾಗಿ ಮಾತನಾಡುವುದು ಹರಟೆಯಾಗುವುದಿಲ್ಲ. ಹರಟೆಯ ಮುಖೇನ ವಿಷಯದ ಕುರಿತ ಜ್ಞಾನವನ್ನು ವ್ಯಕ್ತಿಗೆ ಅಥವಾ ಸಮಾಜಕ್ಕೆ ನೀಡಿದಂತಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಾಣಿಜ್ಯ ಪದವಿ ವಿಭಾಗದ ಉಪನ್ಯಾಸಕಿ ರವಿಕಲಾ ಅಭಿಪ್ರಾಯಪಟ್ಟರು.

ಅವರು ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸಿದ “ಮಣಿಕರ್ಣಿಕಾ” ಮಾತುಗಾರರ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ವಿಷಯದ ಕುರಿತು ಮಾತನಾಡಿದರು. ಹರಟೆಯಲ್ಲಿ ಒಂದು ವಿಷಯದ ಕುರಿತು ನಗೆ ಚಟಾಕಿಯ ಮೂಲಕ ವಿಮರ್ಶೆ ನಡೆಸುವುದು. ಇದರಲ್ಲಿ ಔಪಚಾರಿಕ ಹಾಗೂ ಅನೌಪಚಾರಿಕ ಎಂಬುದಾಗಿ ಹರಟೆಯನ್ನು ವಿಂಗಡಿಸಬಹುದು. ವಿದ್ಯಾರ್ಥಿಗಳು ಮಾಡುವ ಚರ್ಚೆಗಳು ಸಾಮಾನ್ಯವಾಗಿ ಅನೌಪಚಾರಿಕವಾಗಿರುತ್ತದೆ. ಅದೇ ರೀತಿ ಮೊಬೈಲ್ ಮುಖೇನ ಇಂದು ವ್ಯಾಟ್ಸಪ್ ಮೂಲಕ ಮಾತನಾಡುವುದೂ ಒಂದು ರೀತಿಯ ಹರಟೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ದೊರೆತಿರುವ ಈ ವೇದಿಕೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಅಲ್ಲದೆ ವ್ಯಕ್ತಿತ್ವ ವಿಕಸನ ಆಗುವ ದೃಷ್ಟಿಯಿಂದ ಇದು ಸಹಕಾರಿ ಎಂದರು.
ತೃತೀಯ ಬಿಎ ವಿದ್ಯಾರ್ಥಿ ರಾಮಕಿಶನ್ ಕೆ.ವಿ. ವಾರದ ಮಾತುಗಾರ ಬಹುಮಾನ ಪಡೆದರು. ತೃತೀಯ ಬಿಎ ವಿದ್ಯಾರ್ಥಿಗಳು ವಾರದ ಮಾತುಗಾರರ ತಂಡ ಎಂಬ ಬಹುಮಾನ ಪಡೆಯಿತು.
ಪದವಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ, ವೇದಿಕೆಯ ಕಾರ್ಯದರ್ಶಿ ತೇಜಶ್ರೀ ವೆಂಕಟೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯಾ ವಂದಿಸಿದರು. ಕಾರ್ಯಕ್ರಮವನ್ನು ಜಯಶ್ರೀ ಎ. ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

4 minutes ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

8 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

15 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago