Advertisement
ಸುದ್ದಿಗಳು

ಹರಟೆ ವಿಷಯ ಹರಟೆಯೇ ಆಗದಿರಲಿ

Share

ಪುತ್ತೂರು: ಮಾತುಗಾರಿಕೆ ಎಂಬುದು ಒಂದು ಕಲೆ. ಈ ಕಲೆಯ ಮುಂದುವರಿದ ಭಾಗವೇ ಹರಟೆ. ಆದರೆ ಹರಟೆ ಎಂದರೆ ಕೇವಲ ಹಾಸ್ಯವಲ್ಲ. ಬದಲಾಗಿ ಅಲ್ಲಿ ಒಂದು ವಿಷಯದ ಕುರಿತು ಅರ್ಥಗರ್ಭಿತವಾದ ಚರ್ಚೆಯ ಮುಖಾಂತರ ವಿಮರ್ಶಿಸುವುದೇ ಹರಟೆ. ವಿಷಯ ರಹಿತವಾಗಿ ಮಾತನಾಡುವುದು ಹರಟೆಯಾಗುವುದಿಲ್ಲ. ಹರಟೆಯ ಮುಖೇನ ವಿಷಯದ ಕುರಿತ ಜ್ಞಾನವನ್ನು ವ್ಯಕ್ತಿಗೆ ಅಥವಾ ಸಮಾಜಕ್ಕೆ ನೀಡಿದಂತಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಾಣಿಜ್ಯ ಪದವಿ ವಿಭಾಗದ ಉಪನ್ಯಾಸಕಿ ರವಿಕಲಾ ಅಭಿಪ್ರಾಯಪಟ್ಟರು.

ಅವರು ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸಿದ “ಮಣಿಕರ್ಣಿಕಾ” ಮಾತುಗಾರರ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ವಿಷಯದ ಕುರಿತು ಮಾತನಾಡಿದರು. ಹರಟೆಯಲ್ಲಿ ಒಂದು ವಿಷಯದ ಕುರಿತು ನಗೆ ಚಟಾಕಿಯ ಮೂಲಕ ವಿಮರ್ಶೆ ನಡೆಸುವುದು. ಇದರಲ್ಲಿ ಔಪಚಾರಿಕ ಹಾಗೂ ಅನೌಪಚಾರಿಕ ಎಂಬುದಾಗಿ ಹರಟೆಯನ್ನು ವಿಂಗಡಿಸಬಹುದು. ವಿದ್ಯಾರ್ಥಿಗಳು ಮಾಡುವ ಚರ್ಚೆಗಳು ಸಾಮಾನ್ಯವಾಗಿ ಅನೌಪಚಾರಿಕವಾಗಿರುತ್ತದೆ. ಅದೇ ರೀತಿ ಮೊಬೈಲ್ ಮುಖೇನ ಇಂದು ವ್ಯಾಟ್ಸಪ್ ಮೂಲಕ ಮಾತನಾಡುವುದೂ ಒಂದು ರೀತಿಯ ಹರಟೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ದೊರೆತಿರುವ ಈ ವೇದಿಕೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಅಲ್ಲದೆ ವ್ಯಕ್ತಿತ್ವ ವಿಕಸನ ಆಗುವ ದೃಷ್ಟಿಯಿಂದ ಇದು ಸಹಕಾರಿ ಎಂದರು.
ತೃತೀಯ ಬಿಎ ವಿದ್ಯಾರ್ಥಿ ರಾಮಕಿಶನ್ ಕೆ.ವಿ. ವಾರದ ಮಾತುಗಾರ ಬಹುಮಾನ ಪಡೆದರು. ತೃತೀಯ ಬಿಎ ವಿದ್ಯಾರ್ಥಿಗಳು ವಾರದ ಮಾತುಗಾರರ ತಂಡ ಎಂಬ ಬಹುಮಾನ ಪಡೆಯಿತು.
ಪದವಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ.ಆರ್. ನಿಡ್ಪಳ್ಳಿ, ವೇದಿಕೆಯ ಕಾರ್ಯದರ್ಶಿ ತೇಜಶ್ರೀ ವೆಂಕಟೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯಾ ವಂದಿಸಿದರು. ಕಾರ್ಯಕ್ರಮವನ್ನು ಜಯಶ್ರೀ ಎ. ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

7 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago