ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.
ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…