Advertisement
Categories: Uncategorized

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

Share

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

6 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

6 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

7 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

15 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago