Advertisement
ಸುದ್ದಿಗಳು

ಹರಿಹರ ಪಳ್ಳತ್ತಡ್ಕ ಮೊಬೈಲ್ ಸೇವೆಯಲ್ಲಿ ವ್ಯತ್ಯಯ : ಮೊಬೈಲ್ ಟವರಿಗೆ ತರಕಾರಿ ಬಳ್ಳಿ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Share

ಹರಿಹರಪಳ್ಳತ್ತಡ್ಕ:  ಮೊಬೈಲ್ ಸೇವೆಯಲ್ಲಿ ವ್ಯತ್ಯಯ ಆಗುತ್ತಿರುವುದಕ್ಕೆ ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮದ ಗ್ರಾಮಸ್ಥರು ಮಂಗಳವಾರ ಮೊಬೈಲ್ ಟವರಿಗೆ ತರಕಾರಿ ಗಿಡಗಳನ್ನು ಹಬ್ಬಿಸುವ ಮೂಲಕ ಮಂಗಳವಾರ ವಿನೂತನ ಶೈಲಿಯಲ್ಲಿ ಸಾಂಕೇತಿಕ ಪ್ರತಿಭಟಿಸಿದರು.

ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ  ಬಿಎಸ್‍ಎನ್‍ಎಲ್ ಮೊಬೈಲ್ ಟವರು ಕಳೆದ ಎಂಟು ತಿಂಗಳಿಂದ ಸರಿಯಾಗಿ ಕಾರ್ಯಚರಿಸುತ್ತಿ ರಲಿಲ್ಲ. ಇದರಿಂದ ಹರಿಹರ, ಬಾಳುಗೋಡು, ಐನಕಿದು, ಕಲ್ಲೇಮಠ, ಕಲ್ಲೇರಿಕಟ್ಟ, ಮಿತ್ತಮಜಲು, ಕಿರಿಭಾಗ ಮೊದಲಾದ ಭಾಗದ ಜನತೆ ತೊಂದರೆ ಅನುಭವಿಸುತ್ತಿದ್ದರು. ಟವರು ಸಿಗ್ನಲ್ ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಅನೇಕ ಭಾರಿ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಸರಿ ಹೋಗಿರಲಿಲ್ಲ. ಇದಕ್ಕೆ ಬೇಸತ್ತ ಗ್ರಾಮಸ್ಥರು ಉಪಯೋಗಕ್ಕೆ ಬಾರದ ಮೊಬೈಲ್ ಟವರಿಗೆ ತರಕಾರಿ ಗಿಡಗಳನ್ನು ನೆಟ್ಟು ಪ್ರತಿಭಟಿಸಿದರು.

ಈ ಭಾಗದಲ್ಲಿ ಬಿಎಸ್‍ಎನ್‍ಎಲ್ ಮೊಬೈಲ್ ಹೊರತು ಪಡಿಸಿ ಇನ್ಯಾವುದೇ ಖಾಸಗಿ ಮೊಬೈಲ್ ಸೇವೆಗಳಿಲ್ಲ. ಇತ್ತೀಚಿನ ದಿನಗಳಲ್ಲಿ ಇಲ್ಲಿರುವ ಮೊಬೈಲ್ ಸಿಗ್ನಲ್ ದಿನದ ಬಹುತೇಕ ಹೊತ್ತು ಕಣ್ಮರೆಯಾಗುತ್ತಿದೆ. ಮೊದಲೆಲ್ಲ ಕರೆಂಟು ಇದ್ದಾಗ ಇರುತಿದ್ದ ಸಿಗ್ನಲ್ ಈಗೀಗ ಕರೆಂಟು ಇದ್ದರೂ ಸ್ಥಗಿತಗೊಳ್ಳುತ್ತಿದೆ. ಹೀಗಾಗಿ ಇಲ್ಲಿನ ಟವರು ಊಟಕಿಲ್ಲದ ಉಪ್ಪಿನಕಾಯಿ ಅಂತಾಗಿದೆ.ಇದರಿಂದ ಬೇಸತ್ತು ಗ್ರಾಮಸ್ಥರು ಅಧಿಕಾರಿಗಳ, ಜನಪ್ರತಿನಿಧಿಗಳ ಗಮನ ಸೆಳೆಯಲು ಶಾಂತಿಯುತವಾಗಿ ಸಾಂಕೇತಿಕ ರೀತಿಯಲ್ಲಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಇಲ್ಲಿನ ಮೊಬೈಲ್ ಟವರು ಸೇವೆ ಅಗತ್ಯಕ್ಕೆ ಸಿಗುತಿಲ್ಲ. ಟವರಿನ ಸಿಗ್ನಲ್ ಸರಿಪಡಿಸುವಂತೆ ಎಲ್ಲ ಪ್ರಯತ್ನ ನಡೆಸಿದ ಮೇಲೆಯೂ ಸರಿ ಹೋಗಿಲ್ಲ. ಹೀಗಾಗಿ ನಮ್ಮ ಬೇಡಿಕೆ ಅರಣ್ಯರೋಧನವಾಗಿದೆ.ಮುಂದೆ ಬಳಕೆಗೆ ಸಿಗದ ಟವರು ಸ್ಥಳಾಂತರಕ್ಕೆ ಪ್ರತಿಭಟನೆ ನಡೆಸುತ್ತೇವೆ ಎಂದು ಈ ಸಂದರ್ಭ ಪ್ರತಿಭಟನೆಗಾರ ವಿನೂಪ ಮಲ್ಲಾರ ತಿಳಿಸಿದರು.

ಪ್ರತಿಭಟನೆಯಲ್ಲಿ ಸ್ಥಳಿಯರಾದ  ಮಧುಸೂಧನ ಕಾಪಿಕಾಡು, ಸಂತೋಷ ಪಳಂಗಾಯ, ಬಾಲಸುಬ್ರಹ್ಮಣ್ಯ ಎಂ, ಲವಮಲ್ಲಾರ, ಕುಸುಮಾಧರ ಐಪಿನಡ್ಕ, ಉಮೇಶ್ ಕಜ್ಜೋಡಿ, ಉಲ್ಲಾಸ ಮುಚ್ಚಾರ, ಯೋಗಿಶ್ ಮೆತ್ತಡ್ಕ, ಪ್ರಸಾದ್ ತಂಟೆಪ್ಪಾಡಿ, ಸೋಮಶೇಖರ ಬಟ್ಟೋಡಿ, ಹವೀನ ಕಲ್ಲೆಮಠ, ನಂದನ್, ಬಾಲಕೃಷ್ಣ ಭೀಮಗುಳಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

2 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

7 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

17 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

17 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

18 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

24 hours ago