ಸುಳ್ಯ: ಸುಳ್ಯ ಕಾಂತಮಂಗಲಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಇಲ್ಲಿನ ಹೋಟೆಲೊಂದರಲ್ಲಿ ಚಾ ಸವಿದರು.
ಬಿಜೆಪಿ ಮುಖಂಡರೊಂದಿಗೆ ಚಹಾ ಮತ್ತು ನೀರುಳ್ಳಿ ಬಜೆಯ ರುಚಿ ಸವಿದ ಅವರು ಹೋಟೆಲ್ ನವರೊಂದಿಗೆ ಮತ್ತು ಸ್ಥಳೀಯರ ಜೊತೆ ಉಭಯ ಕುಶಲೋಪರಿ ನಡೆಸಿದರು. ಸಂಸದರ ಜೊತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೆಲ್ಫಿ ತೆಗೆಸಿಕೊಂಡರು.
ತೃತೀಯ ಬಾರಿಗೆ ಲೋಕಸಭಾ ಸದಸ್ಯನಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಾಂತಮಂಗಲಕ್ಕೆ ಆಗಮಿಸಿದ ನಳಿನ್ ಕುಮಾರ್ ರಿಗೆ ಸ್ಥಳೀಯರು ಸ್ವಾಗತ ನೀಡಿದರು.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…