Advertisement
MIRROR FOCUS

ಹವಾಮಾನದ ವ್ಯತ್ಯಾಸ ಕುತೂಹಲಕಾರಿ….!

Share

ಮೊನ್ನೆ ಮೊನ್ನೆ ಕ್ಯಾರ್ ಚಂಡಮಾರುತದ ಭೀತಿ ಕರಾವಳಿಯಲ್ಲಿತ್ತು. ನಂತರ ಈ ಭಯ ದೂರವಾದ ಬಳಿಕ ಇನ್ನೆರಡು ಚಂಡಮಾರುತದ ಭೀತಿಯೂ ಇತ್ತು. ಸದ್ಯ ಈ ಭಯ ದೂರವಾಯಿತು. ಮಳೆ ಇನ್ನೂ ಒಂದೆರಡು ದಿನ ಇರುತ್ತದೆ. ಏಕೆಂದರೆ ಹವಾಮಾನದ ಬದಲಾವಣೆ ಕುತೂಹಲಕಾರಿ. ಹೀಗಾಗಿಯೇ  ಇಲಾಖೆಗಳು ಸನ್ನದ್ಧವಾಗಿರಬೇಕಾದ ಅನಿವಾರ್ಯತೆ ಇರುತ್ತದೆ.  ಮಳೆ ಹಾಗೂ ಹವಾಮಾನದ ವ್ಯತ್ಯಾಸ ಕಿಲೋಮೀಟರ್ ನಲ್ಲಿ ವ್ಯತ್ಯಾಸವಾಗುತ್ತದೆ. ಈ ಲೆಕ್ಕವನ್ನು  ಸುಳ್ಯನ್ಯೂಸ್.ಕಾಂ ನೀಡಬೇಕು ಎಂಬ ಉದ್ದೇಶ ಹೊಂದಿದೆ.

ಸುಳ್ಯ ಹಾಗೂ ದಕ್ಷಿಣ ಕನ್ನಡದಲ್ಲಿ ಅನೇಕ ವರ್ಷಗಳಿಂದ ಮಳೆ ಲೆಕ್ಕ ಹಾಗುವ ಕೃಷಿಕರು, ಆಸಕ್ತರು ಇದ್ದಾರೆ. ಇದಕ್ಕಾಗಿಯೇ ಮಳೆ ಲೆಕ್ಕ ಎಂಬ ವ್ಯಾಟ್ಸಪ್ ಗ್ರೂಪು ರಚನೆ ಮಾಡಿ ಜಿಲ್ಲೆಯ ವಿವಿದೆಡೆ ಮಳೆ ಲೆಕ್ಕವನ್ನು  ಕೃಷಿಕರೇ ಸಂಗ್ರಹಿಸುತ್ತಾರೆ. ಈ ಬಗ್ಗೆ ಮಾಹಿತಿ ಹೀಗಿದೆ…

ಸುಳ್ಯ ತಾಲೂಕಿನ  ಬಾಳಿಲ ಪಿ ಜಿ ಎಸ್ ಎನ್ ಪ್ರಸಾದ್ ಅವರು ಅನೇಕ ವರ್ಷಗಳಿಂದ ಮಳೆಯ ಲೆಕ್ಕ ಹಾಕುತ್ತಿದ್ದಾರೆ.

ಸುಳ್ಯ ತಾಲೂಕಿನ  ಕೊಲ್ಲಮೊಗ್ರದ ಕೇಶವ ಕಟ್ಟ ಅವರು ಕೂಡಾ ಮಳೆ ಲೆಕ್ಕ ಬರೆಯುತ್ತಾರೆ.

ಸುಳ್ಯ ತಾಲೂಕಿನ  ಕಲ್ಲಾಜೆಯ ಶಿಬಿ ಅಬ್ರಹಾಂ ಅವರೂ ಮಳೆ ದಾಖಲೆ ಬರೆಯುತ್ತಾರೆ.

ಸುಳ್ಯ ತಾಲೂಕಿನ  ಹಾಲೆಮಜಲಿನ ಉಣ್ಣಿಕೃಷ್ಣ ಅವರೂ ಮಳೆ ದಾಖಲೆ ಮಾಡುತ್ತಾರೆ

ಸುಳ್ಯ ತಾಲೂಕಿನ ಕಮಿಲ-ಪುಚ್ಚಪ್ಪಾಡಿಯಲ್ಲಿ  ಮಳೆ ಲೆಕ್ಕದ ಆಸಕ್ತಿ ಹೊಂದಿದವರು ಇದ್ದಾರೆ.

ಕಡಬ ತಾಲೂಕಿನ ಕಡಬದಲ್ಲಿನ ನಿವೃತ್ತ ಅರಣ್ಯಾಧಿಕಾರಿ ಸದಾಶಿವ ಭಟ್ ಅವರಲ್ಲಿ  ಮಳೆ ದಾಖಲೆ ಇದೆ

ಬೆಳ್ತಂಗಡಿ ತಾಲೂಕಿನ ಉರುವಾಲಿನ ಡಾ.ಕಿಶನ್ ಅವರು ಅನೇಕ ವರ್ಷಗಳಿಂದ ಮಳೆ ಲೆಕ್ಕ ಇದೆ

ಬಂಟ್ವಾಳ ತಾಲೂಕಿನ ವಿಟ್ಲಯ ಕೆಲಿಂಜದ ವೆಂಕಟಗಿರಿ ಅವರು ಮಳೆ ಲೆಕ್ಕ ಬರೆಯುತ್ತಾರೆ.

ಪೆರ್ಲ ಬಳಿಯ ಸ್ವರ್ಗದ ಪಡ್ರೆಯ ವಿವೇಕ್ ಅವರಲ್ಲಿ ಮಳೆ ಲೆಕ್ಕ ಇದೆ.

ಮುಂದೆ ಇಲ್ಲಿನ ಮಳೆ ದಾಖಲೆಗಳನ್ನು ಇಲ್ಲಿ ಪ್ರಕಟ ಮಾಡುವ ಇರಾದೆ ಇದೆ. ಇನ್ನಷ್ಟು ಮಳೆ ಲೆಕ್ಕ ಬರೆಯುವ ಆಸಕ್ತರಿದ್ದರೆ ಅದನ್ನೂ ಸೇರಿಸಿ ಮಳೆಯ ಮಾಪನ ಮಾಡಬಹುದಾಗಿದೆ. ಏಕೆಂದರೆ ಕಿಲೋಮೀಟರ್ ವ್ಯತ್ಯಾಸದಲ್ಲಿ ಬೀಳುವ ಮಳೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಮಳೆ ದಾಖಲೆ ಮಾಡುವವರು ಇದ್ದರೆ ತಿಳಿಸಿದರೆ ಸುಳ್ಯನ್ಯೂಸ್.ಕಾಂ ಗೆ ಮಾಹಿತಿ ನೀಡಬೇಕಾಗಿ ವಿನಂತಿ.

ಭಾನುವಾರದ ಮಳೆಯ ಲೆಕ್ಕ ಹೀಗಿದೆ:

ಕೊಲ್ಲಮೊಗ್ರ : 14 ಮಿಮೀ

ಕಲ್ಲಾಜೆ : 24 ಮಿಮೀ

ಅಡೆಂಜ-ಉರುವಾಲು : 48 ಮಿಮೀ

ಬಾಳಿಲ : 44 ಮಿಮೀ

ಕಡಬ : 23.5 ಮಿಮೀ

ಪಡ್ರೆ : 54 ಮಿಮೀ

ಕಮಿಲ-ಪುಚ್ಚಪ್ಪಾಡಿ : 27 ಮಿಮೀ

ಕೆಲಿಂಜ-ಕೋಡಪದವು :42 ಮಿಮೀ

ಹಾಲೆಮಜಲು : 29 ಮಿಮೀ

ಸೋಮವಾರ:

ಕೊಲ್ಲಮೊಗ್ರ : 19 ಮಿಮೀ

ಹಾಲೆಮಜಲು : 5 ಮಿಮೀ

ಅಡೆಂಜ-ಉರುವಾಲು : 1 ಮಿಮೀ

ಕಮಿಲ-ಪುಚ್ಚಪ್ಪಾಡಿ : 4 ಮಿಮೀ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago