Advertisement
ಸುದ್ದಿಗಳು

‘ಹವಿಗನ್ನಡ ಭಾಷೆ ಮತ್ತು ಸಾಹಿತ್ಯ’ ವಿಷಯದ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಗೆ ತೆರೆ

Share

ಪುತ್ತೂರು: ಹವ್ಯಕ ಭಾಷೆಯು ಕಾವ್ಯದ ರೂಪವನ್ನು ಹೊಂದಿದೆ. ಆದರೆ ಇಂದು ಹವ್ಯಕ ಭಾಷೆಯಲ್ಲಿ ಅಂಗ್ಲಭಾಷೆಯು ಹೊಂದಿಕೊಂಡಿರುವುದರಿಂದ ಈ ಭಾಷೆಯ ಪದಗಳು ಸ್ವಲ್ಪ ರೀತಿಯ ಬದಲಾವಣೆಯನ್ನು ತಂದಿದೆ. ಹಾಗಾಗಿ ಆಂಗ್ಲ ಭಾಷೆಯನ್ನು ಹವಿಗನ್ನಡದೊಂದಿಗೆ ಸಂಯೋಜಿಸಿ ಮಾತನಾಡುವುದರಿಂದ ಭಾಷಾ ಸ್ಪಷ್ಟನೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಭಾಷೆಯ ಪದಪುಂಜಗಳು ಮರೆಯಾಗುತ್ತಿವೆ. ಇದರಿಂದ ಹವಿಗನ್ನಡದ ಬಳಕೆಯು ಕಡಿಮೆಯಾಗುತ್ತ ಹೋಗಿದೆ ಎಂದು ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ ಹೇಳಿದರು.

Advertisement
Advertisement

ಅವರು ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ವಿವೇಕಾನಂದ ಸೆಂಟರ್ ಫಾರ್ ರಿಸರ್ಚ್ ಸ್ಟಡೀಸ್ ಆಶ್ರಯದಲ್ಲಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ನಡೆದ ‘ಹವಿಗನ್ನಡ ಭಾಷೆ ಮತ್ತು ಸಾಹಿತ್ಯ’ ವಿಷಯದ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಯ ಸಮಾರೋಪದಲ್ಲಿ ಸಮಾರೋಪ ಭಾಷಣದಲ್ಲಿ ಮಾತನಾಡಿದರು.

ಸಂಸ್ಕೃತಿಯ ಮೇಲೆ ಹೊರಗಿನ ಅಂಶಗಳು ಪ್ರಭಾವ ಬೀರಿರುವುದರಿಂದ ಈ ಪದಪ್ರಯೋಗದಲ್ಲಿ ಬದಲಾವಣೆಯನ್ನು ಕಾಣಬಹುದು. ಆದುದರಿಂದ ಕಾಲ ಬದಲಾದಂತೆ ಈ ಭಾಷೆಯು ಬದಲಾಗುತ್ತಲೇ ಇದೆ. ಇಂದು ಹವಿಗನ್ನಡವನ್ನು ನೋಡಿದರೆ ಮಗುವಿನ ಮಾತುಗಳನ್ನು ಗಮನಿಸಿದರೆ ಹೇಗೆ ತಪ್ಪುಗಳು ಇರುತ್ತದೆಯೋ ಅದೇ ರೀತಿ ಭಾಷಾ ಬೆಳವಣಿಗಯ ಹಂತವನ್ನು ಗಮನಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಮಾತನಾಡಿ, ಹವಿಗನ್ನಡ ಭಾಷೆಯು ಇಂದು ಮುಳುಗಿ ಹೋಗುವ ಸ್ಥಿತಿಯನ್ನು ಹೊಂದಿದೆ. ಆಂಗ್ಲಭಾಷೆಗೆ ಮನಸೋತಿರುವುದು, ಭಾಷೆಯ ಬಳಕೆಯನ್ನು ಮಾಡದೆ ಇರುವುದು ಇದಕ್ಕೆ ಕಾರಣ. ಆದುದರಿಂದ ಎಲ್ಲ್ಲರೂ ಹವಿಗನ್ನಡವನ್ನು ಗೌರವಿಸಿ, ಉಳಿಸಬೇಕು ಹಾಗೂ ಮುಂದಿನ ಪೀಳಿಗೆಯವರು ಕೂಡ ಗೌರವಿಸಬೇಕೆಂದು ಹೇಳಿದರು.

ಈ ಸಂದರ್ಭ ಕಾರ್ಯಕ್ರಮದ ಸಂಯೋಜಕ ಹಾಗೂ ಕನ್ನಡದ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಎಚ್.ಜಿ. ಅವರು ಹವ್ಯಕ ಅಕಾಡೆಮಿ ಬಗ್ಗೆ ಶಿಫಾರಸು ಮಂಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಉಪಸ್ಥಿತರಿದ್ದರು.
ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವಿಜಯಕಾರಂತ ಗಣಪತಿ ರಮೇಶ್ ಸ್ವಾಗತಿಸಿದರು. ಸ್ನಾತಕೋತ್ತರ ವಿಭಾಗಗಳ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

12 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

12 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

13 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

13 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

13 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

13 hours ago