Advertisement
ಸುದ್ದಿಗಳು

‘ಹವಿಗನ್ನಡ ಭಾಷೆ ಮತ್ತು ಸಾಹಿತ್ಯ’ ವಿಷಯದ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಗೆ ತೆರೆ

Share

ಪುತ್ತೂರು: ಹವ್ಯಕ ಭಾಷೆಯು ಕಾವ್ಯದ ರೂಪವನ್ನು ಹೊಂದಿದೆ. ಆದರೆ ಇಂದು ಹವ್ಯಕ ಭಾಷೆಯಲ್ಲಿ ಅಂಗ್ಲಭಾಷೆಯು ಹೊಂದಿಕೊಂಡಿರುವುದರಿಂದ ಈ ಭಾಷೆಯ ಪದಗಳು ಸ್ವಲ್ಪ ರೀತಿಯ ಬದಲಾವಣೆಯನ್ನು ತಂದಿದೆ. ಹಾಗಾಗಿ ಆಂಗ್ಲ ಭಾಷೆಯನ್ನು ಹವಿಗನ್ನಡದೊಂದಿಗೆ ಸಂಯೋಜಿಸಿ ಮಾತನಾಡುವುದರಿಂದ ಭಾಷಾ ಸ್ಪಷ್ಟನೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಭಾಷೆಯ ಪದಪುಂಜಗಳು ಮರೆಯಾಗುತ್ತಿವೆ. ಇದರಿಂದ ಹವಿಗನ್ನಡದ ಬಳಕೆಯು ಕಡಿಮೆಯಾಗುತ್ತ ಹೋಗಿದೆ ಎಂದು ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ವಿವೇಕಾನಂದ ಸೆಂಟರ್ ಫಾರ್ ರಿಸರ್ಚ್ ಸ್ಟಡೀಸ್ ಆಶ್ರಯದಲ್ಲಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ನಡೆದ ‘ಹವಿಗನ್ನಡ ಭಾಷೆ ಮತ್ತು ಸಾಹಿತ್ಯ’ ವಿಷಯದ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಯ ಸಮಾರೋಪದಲ್ಲಿ ಸಮಾರೋಪ ಭಾಷಣದಲ್ಲಿ ಮಾತನಾಡಿದರು.

ಸಂಸ್ಕೃತಿಯ ಮೇಲೆ ಹೊರಗಿನ ಅಂಶಗಳು ಪ್ರಭಾವ ಬೀರಿರುವುದರಿಂದ ಈ ಪದಪ್ರಯೋಗದಲ್ಲಿ ಬದಲಾವಣೆಯನ್ನು ಕಾಣಬಹುದು. ಆದುದರಿಂದ ಕಾಲ ಬದಲಾದಂತೆ ಈ ಭಾಷೆಯು ಬದಲಾಗುತ್ತಲೇ ಇದೆ. ಇಂದು ಹವಿಗನ್ನಡವನ್ನು ನೋಡಿದರೆ ಮಗುವಿನ ಮಾತುಗಳನ್ನು ಗಮನಿಸಿದರೆ ಹೇಗೆ ತಪ್ಪುಗಳು ಇರುತ್ತದೆಯೋ ಅದೇ ರೀತಿ ಭಾಷಾ ಬೆಳವಣಿಗಯ ಹಂತವನ್ನು ಗಮನಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಮಾತನಾಡಿ, ಹವಿಗನ್ನಡ ಭಾಷೆಯು ಇಂದು ಮುಳುಗಿ ಹೋಗುವ ಸ್ಥಿತಿಯನ್ನು ಹೊಂದಿದೆ. ಆಂಗ್ಲಭಾಷೆಗೆ ಮನಸೋತಿರುವುದು, ಭಾಷೆಯ ಬಳಕೆಯನ್ನು ಮಾಡದೆ ಇರುವುದು ಇದಕ್ಕೆ ಕಾರಣ. ಆದುದರಿಂದ ಎಲ್ಲ್ಲರೂ ಹವಿಗನ್ನಡವನ್ನು ಗೌರವಿಸಿ, ಉಳಿಸಬೇಕು ಹಾಗೂ ಮುಂದಿನ ಪೀಳಿಗೆಯವರು ಕೂಡ ಗೌರವಿಸಬೇಕೆಂದು ಹೇಳಿದರು.

ಈ ಸಂದರ್ಭ ಕಾರ್ಯಕ್ರಮದ ಸಂಯೋಜಕ ಹಾಗೂ ಕನ್ನಡದ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಎಚ್.ಜಿ. ಅವರು ಹವ್ಯಕ ಅಕಾಡೆಮಿ ಬಗ್ಗೆ ಶಿಫಾರಸು ಮಂಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಉಪಸ್ಥಿತರಿದ್ದರು.
ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವಿಜಯಕಾರಂತ ಗಣಪತಿ ರಮೇಶ್ ಸ್ವಾಗತಿಸಿದರು. ಸ್ನಾತಕೋತ್ತರ ವಿಭಾಗಗಳ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

14 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

18 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

19 hours ago