Advertisement
ಜಿಲ್ಲೆ

ಹಾಲಿನ ಸೊಸೈಟಿಯಲ್ಲಿ ಇದೆಂತಾ ಚರ್ಚೆ…! ರೈತರ ಮೇಲೆ ಯಾಕಿಷ್ಟು ಕೋಪ…?

Share

ಉಪ್ಪಿನಂಗಡಿ: ಈ ಹಾಲಿನ ಸೊಸೈಟಿಗೆ ರೈತರ ಮೇಲೆ ಯಾಕಿಷ್ಟು ಕೋಪ ಹೇಳಿ…? ರೈತರು, ಹೈನುಗಾರರು ಎಂದರೆ ಬಿಟ್ಟಿ ಹಣಕ್ಕಾಗಿ ಕಾಯುವವರಲ್ಲ, ಕಾಯುವುದೂ ಇಲ್ಲ.

ಈ ಸೊಸೈಟಿಯಲ್ಲಿ  ಮಾತ್ರಾ ಹಾಲಿನಲ್ಲಿ  ಡಿಗ್ರಿ ಇಲ್ಲ ಅಂತ ಕಳೆದ ಕೆಲವು ದಿನಗಳಿಂದ ರಿಜೆಕ್ಟ್ ಮಾಡುತ್ತಿದ್ದಾರೆ. ಹೀಗಾಗಿ ಮಂಗಳವಾರ ಹಾಲು ಸೊಸೈಟಿ ಮುಂದೆ ಪ್ರತಿಭಟನೆ ಮಾಡಿದ್ದಾರೆ.  ಅದರ ವಿವರ ಹೀಗಿದೆ…

 

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೈನುಗಾರಿಕೆ ಈಗ ಸಾಕಷ್ಟು ಬೆಳೆಯುತ್ತಿದೆ. ರೈತರು ಕೂಡಾ ಸಾವಯವ ಕೃಷಿಯತ್ತ ಆಸಕ್ತರಾಗಿ ಹೈನುಗಾರಿಕೆಯನ್ನೂ ಮಾಡುತ್ತಿದ್ದಾರೆ. ಹೀಗಾಗಿ ಹಸುವಿನ ಹಾಲನ್ನು ಸೊಸೈಟಿಗೆ ನೀಡುತ್ತಾರೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣಿರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಮೂರುಗೋಳಿ ಶಾಖೆಯಲ್ಲೂ ಹಾಲು ಸಂಗ್ರಹ ನಡೆಯುತ್ತದೆ. ಸುಮಾರು 2000 ಲೀಟರ್ ಗಿಂತಲೂ ಹೆಚ್ಚು ಹಾಲು ಇಲ್ಲಿ  ಸಂಗ್ರಹವಾಗುತ್ತದೆ. ಬಡವರು , ಮಹಿಳೆಯರು ಸೇರಿದಂತೆ ಅನೇಕ ಹೈನುಗಾರರು  ಹಾಲು ಹಾಕುತ್ತಾರೆ.

ಸೊಸೈಟಿಗೆ ಹಾಲು ನೀಡುವ ವೇಳೆ ಸಹಜವಾಗಿಯೇ ಗುಣಮಟ್ಟದ ಬಗ್ಗೆ ಮಾತು ಬರುತ್ತದೆ. ಎಲ್ಲಾ ಕೃಷಿಕರೂ ಇದೆಲ್ಲವನ್ನೂ ಪಾಲನೆ ಮಾಡುತ್ತಾರೆ. ಹಾಲಿನ ಗುಣಮಟ್ಟದ ಬಗ್ಗೆ ಖಾತ್ರಿ ಮಾಡುತ್ತಾರೆ. ತಮ್ಮಿಂದಾದ ಎಲ್ಲಾ ಪ್ರಯತ್ನ ಮಾಡುತ್ತಾರೆ. ಆದರೆ ಕೆಲವೊಮ್ಮೆ ಆಹಾರದ ವ್ಯತ್ಯಾಸದ ಕಾರಣದಿಂದ ಹಸುವಿನಲ್ಲೂ ದೇಹದಲ್ಲೂ ವ್ಯತ್ಯಾಸವಾಗುತ್ತದೆ. ಹೀಗಾಗಿ ಹಾಲಿನ ಗುಣಮಟ್ಟದಲ್ಲೂ ಕೆಲವೊಮ್ಮೆ ವ್ಯತ್ಯಾಸವಾಗುತ್ತದೆ. ವಿಪರೀತ ಬಿಸಿಲು ಕೂಡಾ ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ.

ಇಲ್ಲಿ ಗಮನಿಸಬೇಕಾದ್ದು ಎಂದರೆ ಹಾಲಿನ ಜಿಡ್ಡಿನ ಅಂಶ  ಶೇ 3.5 ಹಾಗೂ ಸಿಹಿ ಅಂಶ 28 ಡಿಗ್ರಿಗಿಂತ ಹೆಚ್ಚಿರಬೇಕು. ಅದಕ್ಕೆ ಪೂರಕವಾಗಿ ಹಾಲಿನ ಉಷ್ಣತೆಯೂಈ ಇರಬೇಕು. ಈಗ ವಾತಾವರಣದ ಉಷ್ಣತೆಯ ಕಾರಣದಿಂದ ಇದೆಲ್ಲಾ ಏರುಪೇರಾಗುತ್ತದೆ.

ಆದರೆ ತಣ್ಣೀರುಪಂತದ ಮೂರುಗೋಳಿ ಶಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಕೆಲವು   ಹೈನುಗಾರರು ಹಾಕುವ  ಹಾಲನ್ನು ರಿಜೆಕ್ಟ್ ಮಾಡಲಾಗುತ್ತಿದೆ. ಇದರಿಂದ ಹೈನುಗಾರರು ಆಕ್ರೋಶಗೊಂಡಿದ್ದಾರೆ. ಎಲ್ಲಾ ಪ್ರಯತ್ನ ಮಡಿಯೂ ಈ ರೀತಿ ಮಾಡುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಎಲ್ಲಾ ಹೈನುಗಾರರೂ ಇದಕ್ಕೆ ಸಹಮತ ವ್ಯಕ್ತಪಡಿಸಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ, ವಿರೋಧ ಮಾಡಿದ್ದಾರೆ. ಹಾಲು ಒಕ್ಕೂಟ ಈ ಬಗ್ಗೆ ತಕ್ಷಣವೇ ಗಮನಹರಿಸಬೇಕಿದೆ.

ಇನ್ನೊಂದು ಮುಖ್ಯ ಅಂಶವೆಂದರೆ ಹೈನುಗಾರರು ನೀಡುವ ಹಾಲಿನ ಗುಣಮಟ್ಟವನ್ನು  ಸೊಸೈಟಿಯಲ್ಲಿ  ಪರಿಶೀಲನೆ ಮಾಡುವ ಜೊತೆಗೇ ಒಕ್ಕೂಟವು ಅಥವಾ ಯಾವುದೇ ಸಂಸ್ಥೆಗಳು ತಾವು ನೀಡುವ ಹಿಂಡಿ ಸಹಿತ ಇತರ ವಸ್ತುಗಳ ಗುಣಮಟ್ಟದ ಬಗ್ಗೆಯೂ ಖಾತ್ರಿ ನೀಡಬೇಕು ಎಂಬುದು  ಹೈನುಗಾರರ ಒತ್ತಾಯ ಎಲ್ಲಾ ಕಡೆ ಇದೆ. ಆದರೆ ಅದು ಜಾರಿಯಾಗುತ್ತಿಲ್ಲ. ಈ ಹಿಂಡಿ ತಿಂದೇ ಅನೇಕ ಹಸುಗಳಿಗೆ ಸಮಸ್ಯೆಯಾಗುತ್ತದೆ ಈ ಬಗ್ಗೆಯೂ ಗಮನಹರಿಸಬವೇಕು ಎಂಬುದು ಹೈನುಗಾರ  ಸೋಮಶೇಖರ್  ಅಭಿಪ್ರಾಯ.  ಗುಣಮಟ್ಟದ ಖಾತ್ರಿ ಎರಡೂ ಕಡೆಗೂ ಒಂದೇ ಮಾನದಂಡ ಇರಬೇಕು. ಹಿಂಡಿಯ ಗುಣಮಟ್ಟದ ಬಗ್ಗೆ ಖಾತ್ರಿ ಮಾಡಲು ಹೈನುಗಾರರು ಮೈಸೂರಿಗೆ ಪರೀಕ್ಷೆಗೆ ತೆರಳಬೇಕಂತೆ..! ಇದೆಂತಾ ನ್ಯಾಯ..!

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • HERE WE FIRST SEE WHO'S MILK IS REJECTED.!? EITHER DIRECTORS OF ORDINARY PERSON? IN MILK SOCIETY MEMBERS WHY SHOULD OPEN AN ACCOUNTS AT DCC BANK BRANCH EVEN WE HAVE CO-OP SOCIETY NEAR TO THE PLACE. FOR RECEIVE MILK SUPPLIED AMOUNT?
    WHY THE ABOVE? BECAUSE THERE SI A COMMON AGENDA HERE EACH AND EVERY PROBLEMS; POOR MAN BECOME SUFFERING?

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

7 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

11 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago