ಅನುಕ್ರಮ

ಹಾಲಿವುಡ್ ಗೆ ಲಗ್ಗೆ ಇಟ್ಟ ಕರಾವಳಿ ಕನ್ನಡಿಗ ನಕಾಶ್ ಅಝೀಝ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿಯ ಕೀರ್ತಿ ಪತಾಕೆಯನ್ನು ಹಾಲಿವುಡ್ ನಲ್ಲಿ ಹಾರಿಸಲು ಮುಂದಾದ ಕರಾವಳಿ ಕನ್ನಡಿಗ ನಕಾಶ್ ಅಝೀಝ್..!! ಕೆಲವು ವರ್ಷಗಳ ಹಿಂದೆ ಜಿಲ್ಲೆಯಾದ್ಯಂತ ಪ್ರಸಿದ್ದಿ ಪಡೆದ ನೌಶದ್ ಆರ್ಕೆಸ್ಟ್ರಾ ತಂಡದ ಪರಿಚಯ ಇಲ್ಲ ಅಂತ ಹೇಳುವವರೇ ವಿರಳ..!! ಅಂದಿನ ಕಾಲದಲ್ಲಿ ಈ ನೌಶದ್ ಜೂ.ಕಿಶೋರ್ ಕುಮಾರ್ ಎಂದೇ ಪ್ರಸಿದ್ದಿ ..

Advertisement
Advertisement

ಈ ತಂಡದಲ್ಲಿ ಪಳಗಿ ಅದೆಷ್ಟೋ ವರ್ಷಗಳ ಕಾಲ ಆರ್ಕೆಸ್ಟ್ರಾ ತಂಡವನ್ನು ನಡಸಿ ನೌಶದ್ ಕುಟುಂಬ ಸಮೇತ ಮುಬೈನಲ್ಲಿ ನೆಲೆಸಿದರು. ಹನಿ ಹನಿ ಗೂಡಿ ಹಳ್ಳ ಎಂಬಂತೆ ಒಂದೊಂದೇ ಹೆಜ್ಜೆ ಮುಂದಿಟ್ಟರು.ಕರಾವಳಿಯಿಂದ ಮಾಯಾ ನಗರಿ ಮುಂಬೈ ಪಯಣ ಬೆಳೆಸಿದ ನಕಾಶ್ ಅಝೀಝ್ ಮುಂದೆ ಇಂಡಿಯನ್‌ ಐಡಲ್‌ ರಿಯಾಲಿಟಿ ಶೋನಲ್ಲೂ ಮಿಂಚಿದರು. ತನ್ನನು ತಾನೇ ತೊಡಗಿಸಿಕೊಂಡ ನಕಾಶ್ ಅದೆಸ್ಟೋ ಹಿಂದಿ ಚಿತ್ರದಲ್ಲಿ ಹಾಡಿದ್ದಾನೆ. ಯುವ ಮನವನ್ನು ಗೆದ್ದ ಕೊಕ್ ಟೈಲ್, ಬರ್ಫಿ, ವಿನೋದ್ ಏಜೆಂಟ್ ಅಲ್ಲದೆ ಇನ್ನಿತರ ಸಿನಿಮಾಗಳಲ್ಲಿ ಹಾಡಿದ ಹಿರಿಮೆ ಈ ಕನ್ನಡ ಕುವರನಿಗಿದೆ.

ಈತನ ಪ್ರತಿಯೊಂದು ಹಾಡು ಹಿಟ್ ಆಗಿದ್ದರೂ ಹಾಡಿವದರು ಯಾರೂ ಅಂತ ಯಾರಿಗೂ ಗೊತ್ತಿಲ್ಲ.. ಈತನ ಹಾಡು ಹಿಟ್ ಆಗುವಂತೆ ಎಲ್ಲಾ ಹಾಡುಗಳ ಕ್ರೆಡಿಟ್ ಮಾತ್ರ ಮಂಗ ಮಾಯವಾಗುತಿತ್ತು.. ಅದರೂ ಈ ನಕಾಶ್ ಸದ್ದಿಲ್ಲದೆ ಸುದ್ದಿಯಾಗಿದ್ದಾನೆ .. ಇದೀಗ ಯುವ ಪ್ರೇಮಿಗಳ ಮನ ಗೆದ್ದ ‘ಸಾರಿ ಕಾ ಫಾಲ್ಸ್’ ಹಾಡು ಈತನ ಅದೃಷ್ಟ ಬದಲಾಯಿಸಿತು. ಈತನ ಪ್ರತಿಭೆ ನೋಡಿ ಸಂಗೀತ ನಿರ್ದೇಶಕ ಪ್ರೀತಂ ತನ್ನ ಜೊತೆ ಕೆಲಸ ಮಾಡುವಂತೆ ಕರೆದರು. ಸಿಕ್ಕಿದ ಭಾಗ್ಯವನ್ನು ಕೈ ಬಿಡದೆ ಪ್ರೀತಂ ಅವರ ಒಂದಿಸ್ಟು ಚಿತ್ರಗಳಲ್ಲಿ ಹಾಡಿ ಸೈ ಎನಿಸಿಕೊಂಡರು. ಅಲ್ಲಿಗೆ ಈತ ಕೊನೆಗೊಳಿಸಿಲ್ಲ ಮತ್ತಷ್ಟು ಬೆಳೆಯಬೇಕೆಂದು ಪಣತೊಟ್ಟ.

ಪ್ರೀತಂ ಅವರ ಚಿತ್ರದಲ್ಲಿ ಹಾಡಿರುವ ಸುಮಧುರ ಸಂಗೀತವನ್ನು ಕೇಳಿ ಸಂಗೀತ ಲೋಕದ ದಿಗ್ಗಜ ಎ ಆರ್ ರೆಹಮಾನ್ ಬೌಲ್ದ್ ಆದರು.. ನನಗೂ ಈತನಿಂದ ಹಾಡಿಸಬೇಕು ಎಂದ ಎ ಆರ್ ರೆಹಮಾನ್ ಕೂಡ ಆತನನ್ನು ತಮ್ಮ ಸಿನಿಮಾದಲ್ಲೂ ಹಾಡಿಸಿದರು.

ಇದೀಗ ನಮ್ಮೂರಿನ ಕರಾವಳಿ ಕನ್ನಡಿಗ ವಿಶ್ವವಿಖ್ಯಾತ ನಿರ್ದೇಶಕ ಸ್ಟೀವನ್‌ ಸ್ಪೀಲ್‌ಬರ್ಗ್‌ ಮತ್ತು ವಿಶ್ವ ಪ್ರಸಿದ್ಧ ಓಪ್ರಾ ವಿನ್‌ಫ್ರೆ ಸೇರಿ “ದಿ ಹಂಡ್ರೆಡ್‌ ಫ‌ೂಟ್‌ ಜರ್ನಿ’ ಎಂಬ ಸಿನಿಮಾವನ್ನು ನಿರ್ಮಿಸುವ ಚಿತ್ರಕ್ಕೆ ಸಂಗೀತ ನೀಡಲು ಮುಂದಾಗಿದ್ದಾನೆ. ಅದರೂ ಈ ಮಹಾ ನಿರ್ದೇಶಕ ಯಾರೂ ಎಂಬ ಪ್ರಶ್ನೆ..? ಅಂಗೈಯಲ್ಲಿ ಜಗತ್ತು.. ಎಂಬಂತೆ ಪುಟ್ಟ ಮಕ್ಕಳಿಂದ ವಯೋ ವೃದ್ದ ರವರೆಗೆ 1993 ರಲ್ಲಿ ಬಂದ ‘ಜುರಾಸಿಕ್ ಪಾರ್ಕ್’ ಸಿನಿಮಾವನ್ನು ಇಂದಿಗೂ ಯಾರೂ ಮರೆತಿಲ್ಲ.. ಈ ಮಹಾ ಸಿನಿಮಾದ ದಿಗ್ಗಜನೆ ನಕಾಶ್ ಹಾಡುವ ಸಿನಿಮಾದ ನಿರ್ದೇಶಕ ಸ್ಟೀವನ್‌ ಸ್ಪೀಲ್‌ಬರ್ಗ್‌.

Advertisement

ಈತ ನಿರ್ಮಿಸುವ ‘ದಿ ಹಂಡ್ರೆಡ್‌ ಫ‌ೂಟ್‌ ಜರ್ನಿ’ ಸಿನಿಮಾ ಕ್ಕೆ ಸಂಗೀತ ನೀಡುತ್ತಿರುವುದು ಸಂಗೀತ ಮಾಂತ್ರಿಕ ಎ ಆರ್‌ ರೆಹಮಾನ್‌. ಇಂಥ ಮಹಾ ಚಿತ್ರಕ್ಕೆ ಕನ್ನಡದ ಕಂಠವೊಂದು ಧ್ವನಿಯಾಗುವ ಮೂಲಕ ಮಂಗಳೂರು ಮೂಲದ ಕನ್ನಡಿಗನೊಬ್ಬ ಹಾಲಿವುಡ್‌ ಸಿನಿಮಾವೊಂದರಲ್ಲಿ ಹಾಡಿದ ಸಾಧನೆ ಮಾಡಿದ ಹೆಗ್ಗಳಿಕೆಗೆ ಸಲ್ಲುತ್ತದೆ.
ಅತೀ ಸಣ್ಣ ವಯಸ್ಸಿನಲ್ಲೇ ಕನ್ನಡದ ಕಂದ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರೂ ಕನ್ನಡ ನಂಟನ್ನು ಬಿಟ್ಟವನಲ್ಲ..

ಕನ್ನಡ ಚತ್ರ ರಂಗದ ಖ್ಯಾತ ಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ತಮಸ್ಸು’ ಚಿತ್ರದಲ್ಲಿ ‘ಮಾರ್ ಮಾರ್’ ಎಂಬ ಹಾಡಿಗೆ ಧ್ವನಿಗೂಡಿಸಿದ್ದಾನೆ, ಸ್ಟೈಲ್ ಕಿಂಗ್ ಉಪೇಂದ್ರ ಅಭಿನಯದ ‘ಬ್ರಹ್ಮ’ ಚಿತ್ರಕ್ಕೂ ಈ ನಕಾಶ್ ಹಾಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾನೆ. ದಕ್ಷಿಣ ಕನ್ನಡದ ಮೂಡಬಿದ್ರಿಯಲ್ಲಿ ಜನಿಸಿದ ನಕಾಶ್ ಇದೀಗ ಕುಟುಂಬ ಸಮೇತ ಮುಂಬೈನಲ್ಲಿ ನೆಲೆಸಿದ್ದಾರೆ.

ಬರಹ – ಅನ್ಸಾರ್ ಬೆಳ್ಳಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

9 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

9 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

12 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

12 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

12 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago