Advertisement
ಅಂಕಣ

ಹಾಲಿವುಡ್ ಗೆ ಲಗ್ಗೆ ಇಟ್ಟ ಕರಾವಳಿ ಕನ್ನಡಿಗ ನಕಾಶ್ ಅಝೀಝ್

Share

ಕರಾವಳಿಯ ಕೀರ್ತಿ ಪತಾಕೆಯನ್ನು ಹಾಲಿವುಡ್ ನಲ್ಲಿ ಹಾರಿಸಲು ಮುಂದಾದ ಕರಾವಳಿ ಕನ್ನಡಿಗ ನಕಾಶ್ ಅಝೀಝ್..!! ಕೆಲವು ವರ್ಷಗಳ ಹಿಂದೆ ಜಿಲ್ಲೆಯಾದ್ಯಂತ ಪ್ರಸಿದ್ದಿ ಪಡೆದ ನೌಶದ್ ಆರ್ಕೆಸ್ಟ್ರಾ ತಂಡದ ಪರಿಚಯ ಇಲ್ಲ ಅಂತ ಹೇಳುವವರೇ ವಿರಳ..!! ಅಂದಿನ ಕಾಲದಲ್ಲಿ ಈ ನೌಶದ್ ಜೂ.ಕಿಶೋರ್ ಕುಮಾರ್ ಎಂದೇ ಪ್ರಸಿದ್ದಿ ..

Advertisement
Advertisement
Advertisement
Advertisement

ಈ ತಂಡದಲ್ಲಿ ಪಳಗಿ ಅದೆಷ್ಟೋ ವರ್ಷಗಳ ಕಾಲ ಆರ್ಕೆಸ್ಟ್ರಾ ತಂಡವನ್ನು ನಡಸಿ ನೌಶದ್ ಕುಟುಂಬ ಸಮೇತ ಮುಬೈನಲ್ಲಿ ನೆಲೆಸಿದರು. ಹನಿ ಹನಿ ಗೂಡಿ ಹಳ್ಳ ಎಂಬಂತೆ ಒಂದೊಂದೇ ಹೆಜ್ಜೆ ಮುಂದಿಟ್ಟರು.ಕರಾವಳಿಯಿಂದ ಮಾಯಾ ನಗರಿ ಮುಂಬೈ ಪಯಣ ಬೆಳೆಸಿದ ನಕಾಶ್ ಅಝೀಝ್ ಮುಂದೆ ಇಂಡಿಯನ್‌ ಐಡಲ್‌ ರಿಯಾಲಿಟಿ ಶೋನಲ್ಲೂ ಮಿಂಚಿದರು. ತನ್ನನು ತಾನೇ ತೊಡಗಿಸಿಕೊಂಡ ನಕಾಶ್ ಅದೆಸ್ಟೋ ಹಿಂದಿ ಚಿತ್ರದಲ್ಲಿ ಹಾಡಿದ್ದಾನೆ. ಯುವ ಮನವನ್ನು ಗೆದ್ದ ಕೊಕ್ ಟೈಲ್, ಬರ್ಫಿ, ವಿನೋದ್ ಏಜೆಂಟ್ ಅಲ್ಲದೆ ಇನ್ನಿತರ ಸಿನಿಮಾಗಳಲ್ಲಿ ಹಾಡಿದ ಹಿರಿಮೆ ಈ ಕನ್ನಡ ಕುವರನಿಗಿದೆ.

Advertisement

ಈತನ ಪ್ರತಿಯೊಂದು ಹಾಡು ಹಿಟ್ ಆಗಿದ್ದರೂ ಹಾಡಿವದರು ಯಾರೂ ಅಂತ ಯಾರಿಗೂ ಗೊತ್ತಿಲ್ಲ.. ಈತನ ಹಾಡು ಹಿಟ್ ಆಗುವಂತೆ ಎಲ್ಲಾ ಹಾಡುಗಳ ಕ್ರೆಡಿಟ್ ಮಾತ್ರ ಮಂಗ ಮಾಯವಾಗುತಿತ್ತು.. ಅದರೂ ಈ ನಕಾಶ್ ಸದ್ದಿಲ್ಲದೆ ಸುದ್ದಿಯಾಗಿದ್ದಾನೆ .. ಇದೀಗ ಯುವ ಪ್ರೇಮಿಗಳ ಮನ ಗೆದ್ದ ‘ಸಾರಿ ಕಾ ಫಾಲ್ಸ್’ ಹಾಡು ಈತನ ಅದೃಷ್ಟ ಬದಲಾಯಿಸಿತು. ಈತನ ಪ್ರತಿಭೆ ನೋಡಿ ಸಂಗೀತ ನಿರ್ದೇಶಕ ಪ್ರೀತಂ ತನ್ನ ಜೊತೆ ಕೆಲಸ ಮಾಡುವಂತೆ ಕರೆದರು. ಸಿಕ್ಕಿದ ಭಾಗ್ಯವನ್ನು ಕೈ ಬಿಡದೆ ಪ್ರೀತಂ ಅವರ ಒಂದಿಸ್ಟು ಚಿತ್ರಗಳಲ್ಲಿ ಹಾಡಿ ಸೈ ಎನಿಸಿಕೊಂಡರು. ಅಲ್ಲಿಗೆ ಈತ ಕೊನೆಗೊಳಿಸಿಲ್ಲ ಮತ್ತಷ್ಟು ಬೆಳೆಯಬೇಕೆಂದು ಪಣತೊಟ್ಟ.

ಪ್ರೀತಂ ಅವರ ಚಿತ್ರದಲ್ಲಿ ಹಾಡಿರುವ ಸುಮಧುರ ಸಂಗೀತವನ್ನು ಕೇಳಿ ಸಂಗೀತ ಲೋಕದ ದಿಗ್ಗಜ ಎ ಆರ್ ರೆಹಮಾನ್ ಬೌಲ್ದ್ ಆದರು.. ನನಗೂ ಈತನಿಂದ ಹಾಡಿಸಬೇಕು ಎಂದ ಎ ಆರ್ ರೆಹಮಾನ್ ಕೂಡ ಆತನನ್ನು ತಮ್ಮ ಸಿನಿಮಾದಲ್ಲೂ ಹಾಡಿಸಿದರು.

Advertisement

ಇದೀಗ ನಮ್ಮೂರಿನ ಕರಾವಳಿ ಕನ್ನಡಿಗ ವಿಶ್ವವಿಖ್ಯಾತ ನಿರ್ದೇಶಕ ಸ್ಟೀವನ್‌ ಸ್ಪೀಲ್‌ಬರ್ಗ್‌ ಮತ್ತು ವಿಶ್ವ ಪ್ರಸಿದ್ಧ ಓಪ್ರಾ ವಿನ್‌ಫ್ರೆ ಸೇರಿ “ದಿ ಹಂಡ್ರೆಡ್‌ ಫ‌ೂಟ್‌ ಜರ್ನಿ’ ಎಂಬ ಸಿನಿಮಾವನ್ನು ನಿರ್ಮಿಸುವ ಚಿತ್ರಕ್ಕೆ ಸಂಗೀತ ನೀಡಲು ಮುಂದಾಗಿದ್ದಾನೆ. ಅದರೂ ಈ ಮಹಾ ನಿರ್ದೇಶಕ ಯಾರೂ ಎಂಬ ಪ್ರಶ್ನೆ..? ಅಂಗೈಯಲ್ಲಿ ಜಗತ್ತು.. ಎಂಬಂತೆ ಪುಟ್ಟ ಮಕ್ಕಳಿಂದ ವಯೋ ವೃದ್ದ ರವರೆಗೆ 1993 ರಲ್ಲಿ ಬಂದ ‘ಜುರಾಸಿಕ್ ಪಾರ್ಕ್’ ಸಿನಿಮಾವನ್ನು ಇಂದಿಗೂ ಯಾರೂ ಮರೆತಿಲ್ಲ.. ಈ ಮಹಾ ಸಿನಿಮಾದ ದಿಗ್ಗಜನೆ ನಕಾಶ್ ಹಾಡುವ ಸಿನಿಮಾದ ನಿರ್ದೇಶಕ ಸ್ಟೀವನ್‌ ಸ್ಪೀಲ್‌ಬರ್ಗ್‌.

ಈತ ನಿರ್ಮಿಸುವ ‘ದಿ ಹಂಡ್ರೆಡ್‌ ಫ‌ೂಟ್‌ ಜರ್ನಿ’ ಸಿನಿಮಾ ಕ್ಕೆ ಸಂಗೀತ ನೀಡುತ್ತಿರುವುದು ಸಂಗೀತ ಮಾಂತ್ರಿಕ ಎ ಆರ್‌ ರೆಹಮಾನ್‌. ಇಂಥ ಮಹಾ ಚಿತ್ರಕ್ಕೆ ಕನ್ನಡದ ಕಂಠವೊಂದು ಧ್ವನಿಯಾಗುವ ಮೂಲಕ ಮಂಗಳೂರು ಮೂಲದ ಕನ್ನಡಿಗನೊಬ್ಬ ಹಾಲಿವುಡ್‌ ಸಿನಿಮಾವೊಂದರಲ್ಲಿ ಹಾಡಿದ ಸಾಧನೆ ಮಾಡಿದ ಹೆಗ್ಗಳಿಕೆಗೆ ಸಲ್ಲುತ್ತದೆ.
ಅತೀ ಸಣ್ಣ ವಯಸ್ಸಿನಲ್ಲೇ ಕನ್ನಡದ ಕಂದ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರೂ ಕನ್ನಡ ನಂಟನ್ನು ಬಿಟ್ಟವನಲ್ಲ..

Advertisement

ಕನ್ನಡ ಚತ್ರ ರಂಗದ ಖ್ಯಾತ ಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ತಮಸ್ಸು’ ಚಿತ್ರದಲ್ಲಿ ‘ಮಾರ್ ಮಾರ್’ ಎಂಬ ಹಾಡಿಗೆ ಧ್ವನಿಗೂಡಿಸಿದ್ದಾನೆ, ಸ್ಟೈಲ್ ಕಿಂಗ್ ಉಪೇಂದ್ರ ಅಭಿನಯದ ‘ಬ್ರಹ್ಮ’ ಚಿತ್ರಕ್ಕೂ ಈ ನಕಾಶ್ ಹಾಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾನೆ. ದಕ್ಷಿಣ ಕನ್ನಡದ ಮೂಡಬಿದ್ರಿಯಲ್ಲಿ ಜನಿಸಿದ ನಕಾಶ್ ಇದೀಗ ಕುಟುಂಬ ಸಮೇತ ಮುಂಬೈನಲ್ಲಿ ನೆಲೆಸಿದ್ದಾರೆ.

ಬರಹ – ಅನ್ಸಾರ್ ಬೆಳ್ಳಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

2 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

8 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago