Advertisement
Exclusive - Mirror Hunt

ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

Share

ಹಿಂಗಾರು ಮಳೆ ಆರಂಭ ಇಡೀ ದೇಶದಿಂದ ನೈರುತ್ಯ ಮುಂಗಾರು ಮಳೆ ಹಿಂದೆ ಸರಿದಿದೆ. ರಾಜಸ್ಥಾನದ ವಾಯುವ್ಯ ಭಾಗದಿಂದ ಹಿಂದೆ ಸರಿಯುವಿಕೆ ಆರಂಭವಾದ ಕೇವಲ ಎಂಟು ದಿನಗಳಲ್ಲೇ ಅತ್ಯಂತ ವೇಗವಾಗಿ ಪೂರ್ತಿಯಾಗಿ ಹಿಂದೆ ಸರಿದಿರುವುದು ಒಂದು ಅಪರೂಪದ ವಿದ್ಯಮಾನವಾಗಿದೆ. ಇದರೊಂದಿಗೆ ಹಿಂಗಾರು ಮಳೆ ಕೂಡಾ ಪ್ರವೇಶಿಸಿದ್ದು , ನಿನ್ನೆ ದಿನ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳದ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ನಿಮ್ನತೆಯೂ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆ ಹೀಗೇ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Advertisement

ಮಳೆಯ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾತುಕತೆ ಹೀಗಿದೆ…

ನಿನ್ನೆಯಿಂದ ಹಿಂಗಾರು ಮಳೆ ಆರಂಭವಾಗಿದೆ.
ಈ ಬಾರಿಯ ನೈರುತ್ಯ ಮುಂಗಾರು 120 ದಿನಗಳ ( ಜೂನ್ 19 – ಅ.15 ) ಅತ್ಯಂತ ಸುದೀರ್ಘ ಅವಧಿಯದ್ದಾಗಿ ಇತಿಹಾಸದ ಪುಟ ಸೇರಿತು.
ಈ ಅವಧಿಯಲ್ಲಿ ಸುರಿದ ಮಳೆ = 3913 ಮಿ.ಮೀ.( ಕಳೆದ ವರ್ಷ 4053 ಮಿ.ಮೀ.)

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 3390
2001 – 2019 = 3288
1976 – 2019 = 3346

> ಗರಿಷ್ಟ 1980 ರಲ್ಲಿ 4796
> ಕನಿಷ್ಟ 1987 ರಲ್ಲಿ 1741

> ಹಿಂಗಾರು ಮಳೆಯ ಸರಾಸರಿ 784 ಮಿ. ಮೀ ( 1976 -2018 )

> ಗರಿಷ್ಟ 1976 ರಲ್ಲಿ ದಾಖಲಾದ 1475 ಮಿ.ಮೀ.

ಕನಿಷ್ಟ 2017 ರಲ್ಲಿ 166 ಮಿ.ಮೀ.
> ಹೆಚ್ಚು ಕಡಿಮೆ ಈ ವರ್ಷದಷ್ಟೇ ಮುಂಗಾರು ಮಳೆ ಸುರಿದ 1990ರಲ್ಲಿ (3921 ಮಿ.ಮೀ.) ಮುಂಗಾರುಪೂರ್ವ 213 ಮಿ.ಮೀ
ಹಿಂಗಾರು 773 ಮಿ.ಮೀ ನೊಂದಿಗೆ 4907 ಮಿ.ಮಿ.ದಾಖಲಾಗಿತ್ತು.

> ಇನ್ನೊಂದು ಸಂದರ್ಭ 2013
ಮುಂಗಾರು ಪೂರ್ವ 395 ಮಿ.ಮೀ.
ಮುಂಗಾರು 3818 ಮಿ.ಮೀ
ಹಿಂಗಾರು 662 ಮಿ.ಮೀ
ಒಟ್ಟು 4875 ಮಿ ಮೀ.

> ಹಾಗಾದರೆ ಈ ವರ್ಷದ ಹಿಂಗಾರು ಮಳೆ… ಕಾದು ನೋಡೋಣ

 ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

3 minutes ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 minutes ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

24 minutes ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

12 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago