ಪುತ್ತೂರು: ಸಾಮಾಜಿಕ, ಧಾರ್ಮಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಪ್ರೇರಣೆಗೊಂಡ ಯುವಕರು ರಚಿಸಿದ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಎ.ಆರ್ ವಾರಿಯರ್ಸ್ ಮೂಲಕ ಇತ್ತೀಚೆಗೆ ಮೃತಪಟ್ಟ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲರ ಸವಿನೆನಪುಗಳ ಜೊತೆಗೆ ಪ್ರತಿ ತಿಂಗಳು ಒಂದು ಅಶಕ್ತ ಕುಟುಂಬಕ್ಕೆ ಆಹಾರ ಧಾನ್ಯ ನೀಡುವ ಯೋಜನೆಯ ಪ್ರಥಮ ಹಂತವಾಗಿ ಕಳೆದ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಪುತ್ತೂರು ತಾಲೂಕಿನ ಬೀರಾವು ನಿವಾಸಿ ಹರೀಶ್ ಅವರ ಮನೆಗೆ ಆಹಾರ ಧಾನ್ಯಗಳನ್ನು ಎ.ಆರ್ ವಾರಿಯರ್ಸ್ ನ ಸದಸ್ಯರು ಒದಗಿಸಿದರು.
ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಸವಣೂರು, ಧನು ಪಟ್ಲ ಕಲ್ಲೇಗ, ಕಮಲ್ ಕುಲಾಲ್, ಸುಜಿತ್ ಬಂಗೇರ ಸಂಟ್ಯಾರ್, ಪ್ರಜನ್ ರೈ ತೊಟ್ಲ, ಭರತ್ ಶೆಟ್ಟಿ, ರಾಕೇಶ್ ಈಶ್ವರಮಂಗಲ, ಮನೋಜ್ ಸಂಟ್ಯಾರ್ ಉಪಸ್ಥಿತರಿದ್ದರು. ಎ ಆರ್ ವಾರಿಯರ್ಸ್ ಬಳಗದ ಮೂಲಕ ಇತ್ತೀಚೆಗೆ ನೂರಾರು ಯುವಕರು ಸೇರಿ ನೆರೆ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಶ್ರಮದಾನ ಕಾರ್ಯ ಮಾಡಿತ್ತು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…