ಪುತ್ತೂರು: ಸಾಮಾಜಿಕ, ಧಾರ್ಮಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಪ್ರೇರಣೆಗೊಂಡ ಯುವಕರು ರಚಿಸಿದ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಎ.ಆರ್ ವಾರಿಯರ್ಸ್ ಮೂಲಕ ಇತ್ತೀಚೆಗೆ ಮೃತಪಟ್ಟ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲರ ಸವಿನೆನಪುಗಳ ಜೊತೆಗೆ ಪ್ರತಿ ತಿಂಗಳು ಒಂದು ಅಶಕ್ತ ಕುಟುಂಬಕ್ಕೆ ಆಹಾರ ಧಾನ್ಯ ನೀಡುವ ಯೋಜನೆಯ ಪ್ರಥಮ ಹಂತವಾಗಿ ಕಳೆದ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಪುತ್ತೂರು ತಾಲೂಕಿನ ಬೀರಾವು ನಿವಾಸಿ ಹರೀಶ್ ಅವರ ಮನೆಗೆ ಆಹಾರ ಧಾನ್ಯಗಳನ್ನು ಎ.ಆರ್ ವಾರಿಯರ್ಸ್ ನ ಸದಸ್ಯರು ಒದಗಿಸಿದರು.
ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಸವಣೂರು, ಧನು ಪಟ್ಲ ಕಲ್ಲೇಗ, ಕಮಲ್ ಕುಲಾಲ್, ಸುಜಿತ್ ಬಂಗೇರ ಸಂಟ್ಯಾರ್, ಪ್ರಜನ್ ರೈ ತೊಟ್ಲ, ಭರತ್ ಶೆಟ್ಟಿ, ರಾಕೇಶ್ ಈಶ್ವರಮಂಗಲ, ಮನೋಜ್ ಸಂಟ್ಯಾರ್ ಉಪಸ್ಥಿತರಿದ್ದರು. ಎ ಆರ್ ವಾರಿಯರ್ಸ್ ಬಳಗದ ಮೂಲಕ ಇತ್ತೀಚೆಗೆ ನೂರಾರು ಯುವಕರು ಸೇರಿ ನೆರೆ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಶ್ರಮದಾನ ಕಾರ್ಯ ಮಾಡಿತ್ತು.
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…