Advertisement
ಮಾಹಿತಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Share

ಮಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ; ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ,     ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳ ಬಗ್ಗೆ ವಿದ್ಯಾರ್ಥಿ ನಿಲಯಗಳ ಮಾಹಿತಿ ಪಡೆದು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಲಾಗಿನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ. ಸಂಖ್ಯಾಬಲ ಹೆಚ್ಚಿಸಲಾಗಿರುವ ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ  ದಾಖಲೆಗಳೊಂದಿಗೆ ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-8050370006, 8050770009 ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

14 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

15 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago