Advertisement
ಸುದ್ದಿಗಳು

ಹಿಂದೂಗಳ ಹಬ್ಬವನ್ನು ಟೀಕಿಸಿದ ಸತೀಶ ಜಾರಕಿಹೊಳಿಯವರು ಕ್ಷಮೆಯಾಚನೆ ಮಾಡಬೇಕು – ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

Share
ಮಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸಿದ್ದು ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.
ನಾಗದೇವರಿಗೆ ಹಾಲನ್ನು ಎರೆಯುವುದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಕರೆ ನೀಡುವ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಕರ್ನಾಟಕದಲ್ಲಿ ಪ್ರತಿ ವರ್ಷ 40 ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ, ನಾಗನಿಗೆ ಹಾಲು ಎರೆಯವ ಬದಲು, ಬಡಮಕ್ಕಳಿಗೆ ಹಾಲು ನೀಡಿ ಎಂದು ಕರೆ ನೀಡಿದ್ದಾರೆ. ಇದು ಇವರ ಹಿಂದೂಗಳ ಧಾರ್ಮಿಕ ಹಬ್ಬಗಳ ಹಿಂದಿರುವ ಶಾಸ್ತ್ರವನ್ನು ಅರಿತುಕೊಳ್ಳದೇ ಹಿಂದುಗಳ ಹಬ್ಬದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಮೋಹನ ಗೌಡ ಹೇಳಿದ್ದಾರೆ.
ಶಿವಲಿಂಗಕ್ಕೆ ಹಾಲು ಅರ್ಪಿಸಬೇಡಿ ಮಕ್ಕಳಿಗೆ ನೀಡಿ ಹೇಳುವವರು, ಹಾಲಿನ ಬೆಲೆ ಹೆಚ್ಚಿಸಲು ಪ್ರತಿಭಟನೆ ಹೆಸರಿನಲ್ಲಿ ಲಕ್ಷಗಟ್ಟಲೆ ಲೀಟರ್ ಹಾಲು ಬೀದಿಯಲ್ಲಿ ಸುರಿಯುವಾಗ ಯಾಕೆ ಮೌನವಾಗಿದ್ದರು? ಅದಲ್ಲದೇ  ಶೇಕಡಾ 80 ರಷ್ಟು ಹಾಲನ್ನು ಕಲಬೆರಕೆ ಮಾಡಿ ಮಾರಾಟ ಮಾಡುವ ಮೂಲಕ ಲಕ್ಷಾಂತರ ಮಕ್ಕಳ ಜೀವನ ಹಾಳು ಮಾಡುವ ಸಮಸ್ಯೆಯ ಬಗ್ಗೆ ಯಾಕೆ ಮೌನ ?  ಎಂದು ಪ್ರಶ್ನಿಸಿದ ಮೋಹನ್‌ ಗೌಡ ಭಾರತೀಯ ಸಂವಿಧಾನವು ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಆಚರಿಸುವ ಸಾಂವಿಧಾನಿಕ ಹಕ್ಕನ್ನು ನೀಡಿದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’ , ಅಪೌಷ್ಟಿಕತೆಯಿಂದ ಸಾಯುತ್ತಿರುವ ಬಡ ಮಕ್ಕಳಿಗೆ ಹಾಲು ಸಿಗದಿರಲು ಸರ್ಕಾರ ಅವರಿಗೆ ಸರಿಯಾದ ಸೌಲಭ್ಯ ಮತ್ತು ಪರಿಹಾರಗಳ ತಲುಪದಿರುವುದರ ಪರಿಣಾಮವಾಗಿದೆ. ಈ ರೀತಿ ಮೂಲ ಸಮಸ್ಯೆಯನ್ನು ಪರಿಹರಿಸದೆ ಕೇವಲ ಮೇಲುಮೇಲಿನ ಉಪಾಯವೆಂದು ನಾಗಪಂಚಮಿ ಅಥವಾ ಮಹಾಶಿವರಾತ್ರಿಯ ಕೇವಲ ಒಂದು ದಿನದ ಹಾಲನ್ನು ನೀಡುವ ಮೂಲಕ ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸಬಹುದೇ? ಎಂದು ಮೋಹನ್‌ ಗೌಡ ಪ್ರಶ್ನಿಸಿದ್ದಾರೆ.
ಇಂದು, ಹಿಂದೂ ಧರ್ಮ, ಸಂಪ್ರದಾಯಗಳು ಮತ್ತು ಹಬ್ಬಗಳ ಮೇಲೆ ಕೆಸರೆರಚಿ ಖ್ಯಾತಿ ಪಡೆಯುವುದು ಫ್ಯಾಷನ್ ಆಗಿದೆ. ಹೀಗೆ ಹೇಳುವವರು ಬಕ್ರಿದ್ ಮತ್ತು ಇತರ ಧರ್ಮಗಳಿಗೆ ಏಕೆ ಮಾರ್ಗದರ್ಶನ ಮಾಡುವುದಿಲ್ಲ? ಹಿಂದೂಗಳು ಸಹಿಷ್ಣುರು, ಆದ್ದರಿಂದ ಅವರನ್ನು ಸಾಫ್ಟ್ ಟಾರ್ಗೆಟ್ ಮಾಡಲಾಗುತ್ತದೆ. ಎಲ್ಲ ಹಿಂದೂಗಳು ಇದನ್ನು ಸಂವಿಧಾನದ ಮಾರ್ಗದಿಂದ ಈ ಹೇಳಿಕೆಯನ್ನು ಬಲವಾಗಿ ವಿರೋಧಿಸುವುದು ಅವಶ್ಯಕ ಸತೀಶ ಜಾರಕಿಹೊಳಿ ಅವರು ಈ ಹೇಳಿಕೆ ಬಗ್ಗೆ ಹಿಂದೂಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಮೋಹನ್‌ ಗೌಡ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

2 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

3 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

4 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

18 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

18 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago