Advertisement
ಸುದ್ದಿಗಳು

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ

Share
ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ಮತ್ತು ಇತರ ಹಿಂದೂ ಸಂಘಟನೆಗಳ  ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ ಪುತ್ತೂರಿನ  ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಇತರ ಹಿಂದೂ ಸಂಘಟನೆಗಳ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನವನ್ನು ನಡೆಯಿತು.
ಹಿಂದೂ ಮುಖಂಡ ಜನಾರ್ದನ ಗೌಡ  ಮಾತನಾಡಿ ದೇಶದ ಅಖಂಡತೆಯಲ್ಲಿ ಅಡೆತಡೆಯಾಗಿದ್ದ ಮತ್ತು ವಿಭಜನೆಯ ಬೀಜವನ್ನು ಬಿತ್ತಿದ ಜಮ್ಮೂ-ಕಾಶ್ಮೀರದ ‘ನಿಯಮ 370′ ಮತ್ತು ’35-ಅ’ ರದ್ದುಪಡಿಸುವ ಐತಿಹಾಸಿಕ ನಿರ್ಣಯವನ್ನು ಕೇಂದ್ರದ ಭಾಜಪ ಸರಕಾರವು ತೆಗೆದುಕೊಂಡಿದೆ.ಇದಕ್ಕಾಗಿ ಅಭಿನಂದನೆಗಳು. ಕನ್ನಡ ವಿರೋಧಿ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು ಬದಲಾಯಿಸಿ  ಶ್ರೀ ಕೃಷ್ಣರಾಜ ಒಡೆಯರ್  ಹೆಸರನ್ನು ಇಡಬೇಕು ಎಂದು ಒತ್ತಾಯಿಸಿದರು. ಹಿಂದೂ ಸಮಾಜದ ವಿರುದ್ಧ ದ್ವೇಷದ ಭಾವನೆಯನ್ನು ಈಚೆಗೆ  ಹರಡಲಾಗುತ್ತಿದೆ. ರಾಷ್ಟ್ರದ ಔರಂಗಾಬಾದ, ಉತ್ತರಪ್ರದೇಶದ ಚಂದೌಲಿ ಮತ್ತು ಉನ್ನಾವದಲ್ಲಿ ಸ್ಥಳೀಯ ಪೊಲೀಸರ ಮೂಲಕ ನಡೆಸಲಾದ ವಿಚಾರಣೆಯಲ್ಲಿ  ಈ ದೂರುಗಳು ಸುಳ್ಳಾಗಿವೆಯೆಂದು ಬಹಿರಂಗವಾಗಿದೆ.  ಈ ಪ್ರಕರಣದಲ್ಲಿ ಉತ್ತರಪ್ರದೇಶದ ಪೊಲೀಸ ಮಹಾಅಧೀಕ್ಷಕರಾದ ಒ.ಪಿ.ಸಿಂಗ್ ಇವರು ‘ಉತ್ತರಪ್ರದೇಶದಲ್ಲಿ ಮತೀಯ ಗಲಭೆಯನ್ನು  ಹರಡಲು ಮತಾಂಧರು ‘ಜಯ ಶ್ರೀರಾಮ’ ಘೋಷಣೆಯನ್ನು ಹೇಳದ ಸುಳ್ಳು ಕಾರಣವನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ಅದಕ್ಕಾಗಿ ಇಂತಹವರ ವಿರುದ್ಧ ರಾಷ್ಟ್ರಮಟ್ಟದಲ್ಲಿ ಒಂದು ವಿಶೇಷ ತನಿಖಾದಳವನ್ನು  ರಚಿಸಬೇಕು ಮತ್ತು ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು” ಎಂದು ವಿಷಯವನ್ನು ಮಂಡಿಸಿದರು.
ಪುತ್ತೂರು ವಿಶ್ವಹಿಂದೂ ಪರಿಷತ್ತಿನ ಪ್ರಖಂಡ ಅಧ್ಯಕ್ಷರು  ಜನಾರ್ದನ ಲಕ್ಷ್ಮೀ ದೇವೀ ಬೆಟ್ಟ ಇವರು ಮಾತನಾಡಿ 370 ಮತ್ತು 35 ಅ ಇದು ಭಾರತಾಂಬೆಯ 70ವರ್ಷಗಳಿಂದ ಕೊರಳಿಗೆ ಕಟ್ಟಿದ ಹಗ್ಗವಾಗಿತ್ತು. ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಆದರ್ಶವನ್ನು ಇಟ್ಟುಕೊಂಡ ಸರಕಾರವು  ಅದನ್ನು ತೆಗೆದು ಹಾಕಿದ್ದು ಇದು ದೇಶಕ್ಕೆ ಸಿಕ್ಕ ಐತಿಹಾಸಿಕ  ಗೆಲುವಾಗಿದೆ..
ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಆದರ್ಶವನ್ನು ಇಟ್ಟು ಮೈಸೂರು- ಬೆಂಗಳೂರು ನಡುವೆ ರೈಲಿಗೆ ಸ್ವಾತಂತ್ರ್ಯ ಹೋರಾಟಗಾರರ  ಹೆಸರನ್ನು ಇಡಬೇಕು..ಹಾಗೆಯೇ ನಿರಾಶ್ರಿತ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಬೇಕು.ಹಗರಣಗಳು ಮತ್ತು ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಚರ್ಚ್ ಗಳನ್ನು ಸರಕಾರೀಕರಣಗೊಳಿಸಬೇಕು” ಎಂದು ವಿಷಯವನ್ನು ಮಂಡಿಸಿದರು.
ಆಂದೋಲನವನ್ನು .ದಯಾನಂದ ಹೆಗ್ಡೆ ಇವರು ಶಂಖನಾದ ಮಾಡುವ ಮೂಲಕ ಪ್ರಾರಂಭಿಸಿದರು. ಕು.ಚೇತನಾ ಇವರು ಆಂದೋಲನವನ್ನು ನಿರೂಪಿಸಿದರು.
ಆಂದೋಲನದ ವಿಷಯದ ಕುರಿತು ಮಾನ್ಯ ಉಪವಿಭಾಗಾಧಿಕಾರಿಗಳಾದ ಹೆಚ್.ಕೆ.ಕೃಷ್ಣಮೂರ್ತಿ, ಇವರ ಮೂಲಕ ಕೇಂದ್ರ ಗೃಹಸಚಿವರು ಮತ್ತು ಪ್ರಧಾನಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಚಂದ್ರಶೇಖರ , ಧರ್ಮಪ್ರೇಮಿಗಳಾದ ಲಕ್ಷ್ಮಣ ಬೆಳ್ಳಿಪಾಡಿ,ಮಾಧವ ಎಸ್.ರೈ ಕುಂಬ್ರ, ಸೀತಾರಾಮ ಆಳ್ವ,  ಗಣೇಶ್ ನಾಯಕ್, ಸುರೇಶ್ ಪ್ರಭು, ಗೋಪಾಲ ನಾಯಕ್ ,ಕೃಷ್ಣ ಶೆಟ್ಟಿ ಇವರು ಉಪಸ್ಥಿತಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

14 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago