Advertisement
MIRROR FOCUS

ಹಿಂದೂ ಸಮಾಜದ ಮಹಾಗುರು ಪೇಜಾವರ ವಿಶ್ವೇಶ ತೀರ್ಥ ಶ್ರೀಗಳು ಶ್ರೀಕೃಷ್ಣನಲ್ಲಿ ಲೀನ

Share

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ  ಸಾಮಾಜಿಕ ಸೇವಾ ಕಳಕಳಿಯ, ಹಿಂದೂ ಸಮಾಜದ ಶ್ರೇಷ್ಠ ಸಂತ  ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ಅವರು ಶ್ರೀಕೃಷ್ಣನಲ್ಲಿ  ಲೀನವಾಗಿದ್ದಾರೆ.

ಇದೀಗ ಉಡುಪಿಯಲ್ಲಿ 10 ಗಂಟೆಯಿಂದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಮಧ್ಯಾಹ್ನದ ವೇಳೆಗೆ  ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶರೀರವನ್ನು ಕೊಂಡೊಯ್ದು ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಕಲ್ಪಿಸಲಾಗುತ್ತದೆ. ನಂತರ ವಿದ್ಯಾಪೀಠದಲ್ಲಿ  ಬೃಂದಾವನಸ್ಥರಾಗಲಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.

5 ಪರ್ಯಾಯವನ್ನೇರಿದ್ದ ಉಡುಪಿ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಮುಖ್ಯಪ್ರಾಣನಲ್ಲಿ  ಐಕ್ಯವಾಗಿದ್ದಾರೆ. ಡಿ.19ರಂದು ಸ್ವಾಮೀಜಿಯವರು ಜ್ವರದಿಂದ ಬಳಲುತ್ತಿದ್ದರೂ ಎರಡು ಮೂರು ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾಗಿ ಮಠಕ್ಕೆ ಮರಳಿದ್ದರು. ಡಿ.20ರ ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕರೆದುಕೊಂಡುಬರಲಾಗಿತ್ತು. 8 ದಿನಗಳ  ವೈದ್ಯರ ಸತತ ಪರಿಶ್ರಮ ಬಳಿಕವೂ ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ.

ಪೂರ್ವಾಶ್ರಮ : ಪುತ್ತೂರು ತಾಲೂಕಿನ ರಾಮಕುಂಜದಲ್ಲಿ 1931 ಎಪ್ರಿಲ್ 27 ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದರು. ತಂದೆ ನಾರಾಯಣಾಚಾರ್ಯ, ತಾಯಿ ಕಮಲಮ್ಮ. ಹುಟ್ಟಿದ ಎರಡನೆಯ ಗಂಡುಮಗುವಾಗಿ ವೆಂಕಟ್ರಮಣ ಎಂಬ ಹೆಸರಿನಲ್ಲಿ ಇದ್ದರು. ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸದ ಬಳಿಕ ಆಧ್ಯಾತ್ಮದ ಕಡೆಗೆ ಒಲವು ತೋರಿದ ಶ್ರೀಗಳು ಪೇಜಾವರ ಮಠಾಧೀಶರಾಗಿ ಸನ್ಯಾಸ ಸ್ವೀಕರಿಸಿದ್ದರು.7 ವರ್ಷದ ಬಾಲಕ ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ, ಪೇಜಾವರ ಮಠದ ಪರಂಪರೆಯ 32ನೆಯ ಯತಿಯಾಗಿ, 1938 ರ ಡಿ.3 ರಂದು ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದರು. ಆ ಬಳಿಕ ವೆಂಕಟ್ರಮಣ ‘ವಿಶ್ವೇಶ ತೀರ್ಥ’ರಾದರು. 1952 ಜನವರಿ 18 ರಂದು, 21ರ ಹರೆಯದಲ್ಲಿ ಮೊದಲ ಪರ್ಯಾಯ ಪೀಠಾರೋಹಣ ಮಾಡಿದರು.

ಮುಂದೇನು ?: ಇದೀಗ ಕೃಷ್ಣನಲ್ಲಿ  ಲೀನವಾಗಿದ್ದಾರೆ ಪೇವಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು. ಮಠದಲ್ಲಿ ಗೋವಿಂದ ನಾಮ ಮೊಳಗುತ್ತಿದೆ. ಮುಂದೆ ಶ್ರೀಗಳ ಶರೀರಕ್ಕೆ ಶ್ರೀಕೃಷ್ಣ ದರ್ಶನ ನಡೆಯುತ್ತದೆ, ಅದಾದ ಬಳಿಕ ಆರತಿ ಬೆಳಗಿ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಆರತಿ ಬೆಳಗಿ ಕಾವಿ ಬಟ್ಟೆ ತೊಡಿಸಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿ ಬೆಂಗಳೂರಿಗೆ ಶರೀರವನ್ನು  ಕೊಂಡೊಯ್ದು ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವಸ್ಥರಾಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

10 minutes ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

15 minutes ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

9 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

10 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

10 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

10 hours ago