Advertisement
MIRROR FOCUS

ಹಿಂದೂ ಸಮಾಜದ ಮಹಾಗುರು ಪೇಜಾವರ ವಿಶ್ವೇಶ ತೀರ್ಥ ಶ್ರೀಗಳು ಶ್ರೀಕೃಷ್ಣನಲ್ಲಿ ಲೀನ

Share

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ  ಸಾಮಾಜಿಕ ಸೇವಾ ಕಳಕಳಿಯ, ಹಿಂದೂ ಸಮಾಜದ ಶ್ರೇಷ್ಠ ಸಂತ  ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ಅವರು ಶ್ರೀಕೃಷ್ಣನಲ್ಲಿ  ಲೀನವಾಗಿದ್ದಾರೆ.

ಇದೀಗ ಉಡುಪಿಯಲ್ಲಿ 10 ಗಂಟೆಯಿಂದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಮಧ್ಯಾಹ್ನದ ವೇಳೆಗೆ  ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶರೀರವನ್ನು ಕೊಂಡೊಯ್ದು ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಕಲ್ಪಿಸಲಾಗುತ್ತದೆ. ನಂತರ ವಿದ್ಯಾಪೀಠದಲ್ಲಿ  ಬೃಂದಾವನಸ್ಥರಾಗಲಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.

5 ಪರ್ಯಾಯವನ್ನೇರಿದ್ದ ಉಡುಪಿ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಮುಖ್ಯಪ್ರಾಣನಲ್ಲಿ  ಐಕ್ಯವಾಗಿದ್ದಾರೆ. ಡಿ.19ರಂದು ಸ್ವಾಮೀಜಿಯವರು ಜ್ವರದಿಂದ ಬಳಲುತ್ತಿದ್ದರೂ ಎರಡು ಮೂರು ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾಗಿ ಮಠಕ್ಕೆ ಮರಳಿದ್ದರು. ಡಿ.20ರ ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕರೆದುಕೊಂಡುಬರಲಾಗಿತ್ತು. 8 ದಿನಗಳ  ವೈದ್ಯರ ಸತತ ಪರಿಶ್ರಮ ಬಳಿಕವೂ ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ.

ಪೂರ್ವಾಶ್ರಮ : ಪುತ್ತೂರು ತಾಲೂಕಿನ ರಾಮಕುಂಜದಲ್ಲಿ 1931 ಎಪ್ರಿಲ್ 27 ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದರು. ತಂದೆ ನಾರಾಯಣಾಚಾರ್ಯ, ತಾಯಿ ಕಮಲಮ್ಮ. ಹುಟ್ಟಿದ ಎರಡನೆಯ ಗಂಡುಮಗುವಾಗಿ ವೆಂಕಟ್ರಮಣ ಎಂಬ ಹೆಸರಿನಲ್ಲಿ ಇದ್ದರು. ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸದ ಬಳಿಕ ಆಧ್ಯಾತ್ಮದ ಕಡೆಗೆ ಒಲವು ತೋರಿದ ಶ್ರೀಗಳು ಪೇಜಾವರ ಮಠಾಧೀಶರಾಗಿ ಸನ್ಯಾಸ ಸ್ವೀಕರಿಸಿದ್ದರು.7 ವರ್ಷದ ಬಾಲಕ ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ, ಪೇಜಾವರ ಮಠದ ಪರಂಪರೆಯ 32ನೆಯ ಯತಿಯಾಗಿ, 1938 ರ ಡಿ.3 ರಂದು ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದರು. ಆ ಬಳಿಕ ವೆಂಕಟ್ರಮಣ ‘ವಿಶ್ವೇಶ ತೀರ್ಥ’ರಾದರು. 1952 ಜನವರಿ 18 ರಂದು, 21ರ ಹರೆಯದಲ್ಲಿ ಮೊದಲ ಪರ್ಯಾಯ ಪೀಠಾರೋಹಣ ಮಾಡಿದರು.

ಮುಂದೇನು ?: ಇದೀಗ ಕೃಷ್ಣನಲ್ಲಿ  ಲೀನವಾಗಿದ್ದಾರೆ ಪೇವಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು. ಮಠದಲ್ಲಿ ಗೋವಿಂದ ನಾಮ ಮೊಳಗುತ್ತಿದೆ. ಮುಂದೆ ಶ್ರೀಗಳ ಶರೀರಕ್ಕೆ ಶ್ರೀಕೃಷ್ಣ ದರ್ಶನ ನಡೆಯುತ್ತದೆ, ಅದಾದ ಬಳಿಕ ಆರತಿ ಬೆಳಗಿ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಆರತಿ ಬೆಳಗಿ ಕಾವಿ ಬಟ್ಟೆ ತೊಡಿಸಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿ ಬೆಂಗಳೂರಿಗೆ ಶರೀರವನ್ನು  ಕೊಂಡೊಯ್ದು ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವಸ್ಥರಾಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

3 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

18 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

18 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago