ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಸಾಮಾಜಿಕ ಸೇವಾ ಕಳಕಳಿಯ, ಹಿಂದೂ ಸಮಾಜದ ಶ್ರೇಷ್ಠ ಸಂತ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ಅವರು ಶ್ರೀಕೃಷ್ಣನಲ್ಲಿ ಲೀನವಾಗಿದ್ದಾರೆ.
ಇದೀಗ ಉಡುಪಿಯಲ್ಲಿ 10 ಗಂಟೆಯಿಂದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಮಧ್ಯಾಹ್ನದ ವೇಳೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶರೀರವನ್ನು ಕೊಂಡೊಯ್ದು ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಕಲ್ಪಿಸಲಾಗುತ್ತದೆ. ನಂತರ ವಿದ್ಯಾಪೀಠದಲ್ಲಿ ಬೃಂದಾವನಸ್ಥರಾಗಲಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.
5 ಪರ್ಯಾಯವನ್ನೇರಿದ್ದ ಉಡುಪಿ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಮುಖ್ಯಪ್ರಾಣನಲ್ಲಿ ಐಕ್ಯವಾಗಿದ್ದಾರೆ. ಡಿ.19ರಂದು ಸ್ವಾಮೀಜಿಯವರು ಜ್ವರದಿಂದ ಬಳಲುತ್ತಿದ್ದರೂ ಎರಡು ಮೂರು ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾಗಿ ಮಠಕ್ಕೆ ಮರಳಿದ್ದರು. ಡಿ.20ರ ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕರೆದುಕೊಂಡುಬರಲಾಗಿತ್ತು. 8 ದಿನಗಳ ವೈದ್ಯರ ಸತತ ಪರಿಶ್ರಮ ಬಳಿಕವೂ ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ.
ಪೂರ್ವಾಶ್ರಮ : ಪುತ್ತೂರು ತಾಲೂಕಿನ ರಾಮಕುಂಜದಲ್ಲಿ 1931 ಎಪ್ರಿಲ್ 27 ರಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದರು ಜನಿಸಿದರು. ತಂದೆ ನಾರಾಯಣಾಚಾರ್ಯ, ತಾಯಿ ಕಮಲಮ್ಮ. ಹುಟ್ಟಿದ ಎರಡನೆಯ ಗಂಡುಮಗುವಾಗಿ ವೆಂಕಟ್ರಮಣ ಎಂಬ ಹೆಸರಿನಲ್ಲಿ ಇದ್ದರು. ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸದ ಬಳಿಕ ಆಧ್ಯಾತ್ಮದ ಕಡೆಗೆ ಒಲವು ತೋರಿದ ಶ್ರೀಗಳು ಪೇಜಾವರ ಮಠಾಧೀಶರಾಗಿ ಸನ್ಯಾಸ ಸ್ವೀಕರಿಸಿದ್ದರು.7 ವರ್ಷದ ಬಾಲಕ ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ, ಪೇಜಾವರ ಮಠದ ಪರಂಪರೆಯ 32ನೆಯ ಯತಿಯಾಗಿ, 1938 ರ ಡಿ.3 ರಂದು ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದರು. ಆ ಬಳಿಕ ವೆಂಕಟ್ರಮಣ ‘ವಿಶ್ವೇಶ ತೀರ್ಥ’ರಾದರು. 1952 ಜನವರಿ 18 ರಂದು, 21ರ ಹರೆಯದಲ್ಲಿ ಮೊದಲ ಪರ್ಯಾಯ ಪೀಠಾರೋಹಣ ಮಾಡಿದರು.
ಮುಂದೇನು ?: ಇದೀಗ ಕೃಷ್ಣನಲ್ಲಿ ಲೀನವಾಗಿದ್ದಾರೆ ಪೇವಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು. ಮಠದಲ್ಲಿ ಗೋವಿಂದ ನಾಮ ಮೊಳಗುತ್ತಿದೆ. ಮುಂದೆ ಶ್ರೀಗಳ ಶರೀರಕ್ಕೆ ಶ್ರೀಕೃಷ್ಣ ದರ್ಶನ ನಡೆಯುತ್ತದೆ, ಅದಾದ ಬಳಿಕ ಆರತಿ ಬೆಳಗಿ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಆರತಿ ಬೆಳಗಿ ಕಾವಿ ಬಟ್ಟೆ ತೊಡಿಸಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿ ಬೆಂಗಳೂರಿಗೆ ಶರೀರವನ್ನು ಕೊಂಡೊಯ್ದು ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವಸ್ಥರಾಗಲಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…