Advertisement
ಧಾರ್ಮಿಕ

ಹಿಂ ಜಾ ವೇ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Share

ಸವಣೂರು : ಸವಣೂರು ಚಂದ್ರನಾಥ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ರಾಜೇಶ್ ಶೆಟ್ಟಿ ಮೇನಾಲ ,ದೇಶದ ಆತ್ಮವೇ ಆಧ್ಯಾತ್ಮ . ದೇಶದಲ್ಲಿನ ಸಂಸ್ಕಾರ, ಸಂಸ್ಕೃತಿ ಬೇರೆ ಎಲ್ಲೂ ಕಾಣಸಿಗದು. ಸ್ವಾಮಿ ವಿವೇಕಾನಂದರ ಅಮೇರಿಕಾ ಪ್ರವಾಸದ ಬಳಿಕ ದೇಶದ ಮೌಲ್ಯಗಳು ವಿಶ್ವವ್ಯಾಪಿಯಾಯಿತು. ಇಂತಹ ಕಾರ್ಯಕ್ರಮದಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಂಡು ನಮ್ಮ ಹಿರಿಯರು ಪಾಲಿಸಿಕೊಂಡ ಬಂದ ಆಚರಣೆಗಳು ಪದ್ದತಿಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಮಾತನಾಡಿ,  ಧರ್ಮದ ಹಾದಿಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ. ಕ್ಷಣಿಕ ಸುಖಕ್ಕಿಂತಲೂ ಆತ್ಮ ಶುದ್ದಿಯಿಂದ ಮಾಡುವ ಕಾರ್ಯಗಳಿಂದ ಸಿಗುವ ಸುಖ ಶ್ರೇಷ್ಠವಾದದು ಎಂದರು.

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ  ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ  ತಾರಾನಾಥ ಕಾಯರ್ಗ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ , ಸವಣೂರು ಹಿಂ.ಜಾ.ವೇಯ ಕಾರ್ಯದರ್ಶಿ ಸಚಿನ್ ಕೋಟ್ಯಾನ್ ಮಡಕೆ ಉಪಸ್ಥಿತರಿದ್ದರು.
ಅರ್ಚಕ ಎಸ್.ಗೋಪಾಲಕೃಷ್ಣ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಪ್ರಸ್ತಾವಿಸಿದರು. ಅಧ್ಯಕ್ಷ ಜನಾರ್ಧನ  ಪಂಜ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಜಗದೀಶ್ ಕೆಡೆಂಜಿ ವಂದಿಸಿದರು. ಪ್ರವೀಣ್ ಚೆನ್ನಾವರ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

10 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

10 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

15 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

15 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

15 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago