Advertisement
ಧಾರ್ಮಿಕ

ಹಿಂ ಜಾ ವೇ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Share

ಸವಣೂರು : ಸವಣೂರು ಚಂದ್ರನಾಥ ಬಸದಿಯ ಪ್ರಿಯಕಾರಿಣಿ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ರಾಜೇಶ್ ಶೆಟ್ಟಿ ಮೇನಾಲ ,ದೇಶದ ಆತ್ಮವೇ ಆಧ್ಯಾತ್ಮ . ದೇಶದಲ್ಲಿನ ಸಂಸ್ಕಾರ, ಸಂಸ್ಕೃತಿ ಬೇರೆ ಎಲ್ಲೂ ಕಾಣಸಿಗದು. ಸ್ವಾಮಿ ವಿವೇಕಾನಂದರ ಅಮೇರಿಕಾ ಪ್ರವಾಸದ ಬಳಿಕ ದೇಶದ ಮೌಲ್ಯಗಳು ವಿಶ್ವವ್ಯಾಪಿಯಾಯಿತು. ಇಂತಹ ಕಾರ್ಯಕ್ರಮದಲ್ಲಿ ಯುವ ಜನತೆ ಹೆಚ್ಚಾಗಿ ಪಾಲ್ಗೊಂಡು ನಮ್ಮ ಹಿರಿಯರು ಪಾಲಿಸಿಕೊಂಡ ಬಂದ ಆಚರಣೆಗಳು ಪದ್ದತಿಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಮಾತನಾಡಿ,  ಧರ್ಮದ ಹಾದಿಯಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ. ಕ್ಷಣಿಕ ಸುಖಕ್ಕಿಂತಲೂ ಆತ್ಮ ಶುದ್ದಿಯಿಂದ ಮಾಡುವ ಕಾರ್ಯಗಳಿಂದ ಸಿಗುವ ಸುಖ ಶ್ರೇಷ್ಠವಾದದು ಎಂದರು.

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ  ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ  ತಾರಾನಾಥ ಕಾಯರ್ಗ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ , ಸವಣೂರು ಹಿಂ.ಜಾ.ವೇಯ ಕಾರ್ಯದರ್ಶಿ ಸಚಿನ್ ಕೋಟ್ಯಾನ್ ಮಡಕೆ ಉಪಸ್ಥಿತರಿದ್ದರು.
ಅರ್ಚಕ ಎಸ್.ಗೋಪಾಲಕೃಷ್ಣ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಪ್ರಸ್ತಾವಿಸಿದರು. ಅಧ್ಯಕ್ಷ ಜನಾರ್ಧನ  ಪಂಜ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಜಗದೀಶ್ ಕೆಡೆಂಜಿ ವಂದಿಸಿದರು. ಪ್ರವೀಣ್ ಚೆನ್ನಾವರ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

39 minutes ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

1 hour ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

7 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

23 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

24 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago