Advertisement
ನಮ್ಮೂರ ಸುದ್ದಿ

ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು

Share

ಬೆಳ್ಳಾರೆ: ಮಾತು ಜನರನ್ನು ಮೋಡಿಗೊಳಿಸುವಷ್ಟು ಆಕರ್ಷ ಮತ್ತು ನಾಜೂಕಾಗಿರಬೇಕು. ಮಾತುಗಾರಿಕೆ ಒಂದು ಅತ್ಯುತ್ತಮ ಕಲೆಯಾಗಿದೆ. ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು ಎಂದು ಉದ್ಯಮಿ ಮಿಥುನ್ ಶೆಣೈ ಹೇಳಿದರು.
ಬೆಳ್ಳಾರೆ ಜೇಸಿಐ ಹಾಗು ಬೆಳ್ಳಾರೆ ಜ್ಞಾನದೀಪ ವಿದ್ಯಾಸಂಸ್ಥೆಯ ಜಂಟಿ ಆಯೋಜನೆಯಲ್ಲಿ ಮೋಂಟೆಸರಿ ವಿದ್ಯಾರ್ಥಿ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜೇಸಿಐ ರಾಷ್ಟ್ರೀಯ ತರಬೇತುದಾರ ಜೇಸಿ ರಾಜೇಂದ್ರ ಭಟ್ ಮಾತನಾಡಿ ದೇಶ ಮತ್ತು ರಾಜ್ಯದ ಶ್ರೇಷ್ಠ ವಾಗ್ಮಿಗಳಲ್ಲಿ ಬಹುತೇಕರು ಜೇಸಿಐ ಹಿನ್ನೆಲೆಯವರಾಗಿದ್ದಾರೆ. ವ್ಯಕ್ತಿತ್ವ ರೂಪಿಸುವುದರಲ್ಲಿ ಮತ್ತು ಮಾತುಗಾರಿಕೆ ಕಲಿಸುವಿಕೆಯಲ್ಲಿ ಜೇಸಿಐ ಅಗ್ರಸ್ಥಾನ ಪಡೆದಿದೆ. ಯುವಜನಾಂಗದವರು ಜೇಸಿಐ ತರಬೇತಿಗಳನ್ನು ಗರಿಷ್ಠ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ವಲಯದ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೇಸಿಐ ಬೆಳ್ಳಾರೆ ಮಾಜಿ ಅಧ್ಯಕ್ಷ ಜಯರಾಮ್ ಉಮಿಕ್ಕಳ, ಪ್ರಧಾನ ಕಾರ್ಯದರ್ಶಿ ಪ್ರವೀಣ್‍ಕುಮಾರ್ ಬೆಳ್ಳಾರೆ, ಯುವ ಜೇಸಿಐ ಅಧ್ಯಕ್ಷ ಸಾಗರ್, ಜ್ಞಾನದೀಪ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು.

Advertisement

ಬಾಲಚಂದ್ರ ಕೋಟೆ ಜೇಸಿಐ ವಾಣಿ ವಾಚಿಸಿದರು. ರಶೀದ್ ಬೆಳ್ಳಾರೆ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

19 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 day ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 day ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 days ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 days ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 days ago