Advertisement
ಸುದ್ದಿಗಳು

ಹಿತಮಿತ ಆಹಾರ ಸೇವನೆಯಿಂದ ಆರೋಗ್ಯ : ಡಾ.ಶಶಿಧರ ಹಾಸನಡ್ಕ

Share

ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ ಕೊಡುವುದಕ್ಕಿಂತ ಮುಂಜಾಗರೂಕತೆ ಮೂಲಕ ಕಟ್ಟುನಿಟ್ಟಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳಬೇಕೆಂದು ಹಾಸನಡ್ಕ ಆರೋಗ್ಯಧಾಮದ ಡಾ.ಶಶಿಧರ ಹಾಸನಡ್ಕ ಹೇಳಿದರು.

ಅವರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ಆಯೋಜಿಸಿದ ತಿಂಡಿ ಮೇಳ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಆಹಾರದ ಬಗ್ಗೆ ಉಪನ್ಯಾಸ ನೀಡಿ, ದೇಹದ ಪ್ರಕೃತಿಗನುಗುಣವಾಗಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು. ಪಾಕತಜ್ಞ ಪಿ.ಎಸ್.ನಾರಾಯಣ ಕೆದಿಲಾಯ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ವತಿಯಿಂದ ಕಾಲುದೀಪ ಮತ್ತು ಆರತಿ ತಟ್ಟೆಯನ್ನು ಶ್ರೀರಾಘವೇಂದ್ರ ಮಠಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ಮುರಳೀಕೃಷ್ಣ ಕಣ್ಣರಾಯ ವಹಿಸಿದ್ದರು. ವೇದಿಕೆಯಲ್ಲಿ ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ರಮೇಶ ಸೋಮಯಾಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್, ಕೋಶಾಧಿಕಾರಿ ಶಶಿಧರ ಕೇಕುಣ್ಣಾಯ, ಯುವ ಘಟಕ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ, ಕಾರ್ಯದರ್ಶಿ ಅರ್ಜುನ್ ಆಚಾರ್ ಸಹಕರಿಸಿದರು.
ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

5 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago