Advertisement
ಸುದ್ದಿಗಳು

ಹಿತಮಿತ ಆಹಾರ ಸೇವನೆಯಿಂದ ಆರೋಗ್ಯ : ಡಾ.ಶಶಿಧರ ಹಾಸನಡ್ಕ

Share

ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ ಕೊಡುವುದಕ್ಕಿಂತ ಮುಂಜಾಗರೂಕತೆ ಮೂಲಕ ಕಟ್ಟುನಿಟ್ಟಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳಬೇಕೆಂದು ಹಾಸನಡ್ಕ ಆರೋಗ್ಯಧಾಮದ ಡಾ.ಶಶಿಧರ ಹಾಸನಡ್ಕ ಹೇಳಿದರು.

ಅವರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ಆಯೋಜಿಸಿದ ತಿಂಡಿ ಮೇಳ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಆಹಾರದ ಬಗ್ಗೆ ಉಪನ್ಯಾಸ ನೀಡಿ, ದೇಹದ ಪ್ರಕೃತಿಗನುಗುಣವಾಗಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು. ಪಾಕತಜ್ಞ ಪಿ.ಎಸ್.ನಾರಾಯಣ ಕೆದಿಲಾಯ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ವತಿಯಿಂದ ಕಾಲುದೀಪ ಮತ್ತು ಆರತಿ ತಟ್ಟೆಯನ್ನು ಶ್ರೀರಾಘವೇಂದ್ರ ಮಠಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ಮುರಳೀಕೃಷ್ಣ ಕಣ್ಣರಾಯ ವಹಿಸಿದ್ದರು. ವೇದಿಕೆಯಲ್ಲಿ ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ರಮೇಶ ಸೋಮಯಾಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್, ಕೋಶಾಧಿಕಾರಿ ಶಶಿಧರ ಕೇಕುಣ್ಣಾಯ, ಯುವ ಘಟಕ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ, ಕಾರ್ಯದರ್ಶಿ ಅರ್ಜುನ್ ಆಚಾರ್ ಸಹಕರಿಸಿದರು.
ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 hour ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago