ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ ಕೊಡುವುದಕ್ಕಿಂತ ಮುಂಜಾಗರೂಕತೆ ಮೂಲಕ ಕಟ್ಟುನಿಟ್ಟಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳಬೇಕೆಂದು ಹಾಸನಡ್ಕ ಆರೋಗ್ಯಧಾಮದ ಡಾ.ಶಶಿಧರ ಹಾಸನಡ್ಕ ಹೇಳಿದರು.
ಅವರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ಆಯೋಜಿಸಿದ ತಿಂಡಿ ಮೇಳ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಆಹಾರದ ಬಗ್ಗೆ ಉಪನ್ಯಾಸ ನೀಡಿ, ದೇಹದ ಪ್ರಕೃತಿಗನುಗುಣವಾಗಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು. ಪಾಕತಜ್ಞ ಪಿ.ಎಸ್.ನಾರಾಯಣ ಕೆದಿಲಾಯ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ವತಿಯಿಂದ ಕಾಲುದೀಪ ಮತ್ತು ಆರತಿ ತಟ್ಟೆಯನ್ನು ಶ್ರೀರಾಘವೇಂದ್ರ ಮಠಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ಮುರಳೀಕೃಷ್ಣ ಕಣ್ಣರಾಯ ವಹಿಸಿದ್ದರು. ವೇದಿಕೆಯಲ್ಲಿ ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ರಮೇಶ ಸೋಮಯಾಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್, ಕೋಶಾಧಿಕಾರಿ ಶಶಿಧರ ಕೇಕುಣ್ಣಾಯ, ಯುವ ಘಟಕ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ, ಕಾರ್ಯದರ್ಶಿ ಅರ್ಜುನ್ ಆಚಾರ್ ಸಹಕರಿಸಿದರು.
ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ನಿರೂಪಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…