Advertisement
ಸುದ್ದಿಗಳು

ಹಿತಮಿತ ಆಹಾರ ಸೇವನೆಯಿಂದ ಆರೋಗ್ಯ : ಡಾ.ಶಶಿಧರ ಹಾಸನಡ್ಕ

Share

ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ ಕೊಡುವುದಕ್ಕಿಂತ ಮುಂಜಾಗರೂಕತೆ ಮೂಲಕ ಕಟ್ಟುನಿಟ್ಟಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳಬೇಕೆಂದು ಹಾಸನಡ್ಕ ಆರೋಗ್ಯಧಾಮದ ಡಾ.ಶಶಿಧರ ಹಾಸನಡ್ಕ ಹೇಳಿದರು.

ಅವರು ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ಆಯೋಜಿಸಿದ ತಿಂಡಿ ಮೇಳ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಆಹಾರದ ಬಗ್ಗೆ ಉಪನ್ಯಾಸ ನೀಡಿ, ದೇಹದ ಪ್ರಕೃತಿಗನುಗುಣವಾಗಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು. ಪಾಕತಜ್ಞ ಪಿ.ಎಸ್.ನಾರಾಯಣ ಕೆದಿಲಾಯ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ವತಿಯಿಂದ ಕಾಲುದೀಪ ಮತ್ತು ಆರತಿ ತಟ್ಟೆಯನ್ನು ಶ್ರೀರಾಘವೇಂದ್ರ ಮಠಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ಮುರಳೀಕೃಷ್ಣ ಕಣ್ಣರಾಯ ವಹಿಸಿದ್ದರು. ವೇದಿಕೆಯಲ್ಲಿ ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ರಮೇಶ ಸೋಮಯಾಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್, ಕೋಶಾಧಿಕಾರಿ ಶಶಿಧರ ಕೇಕುಣ್ಣಾಯ, ಯುವ ಘಟಕ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ, ಕಾರ್ಯದರ್ಶಿ ಅರ್ಜುನ್ ಆಚಾರ್ ಸಹಕರಿಸಿದರು.
ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

8 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

15 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

15 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

22 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

24 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago