ಸುಳ್ಯ :ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ।ಕೆ.ಎಮ್ ಶಾಹ್ ಮುಸ್ಲಿಯಾರ್( 87 )ಮೇ 29 ರಂದು ಬೆಳಗ್ಗೆ ಆತೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಅತೂರು ಬದ್ರಿಯಾ ಜುಮ್ಮಾಮಸೀದಿಯಲ್ಲಿ ಕೆಲ ವರ್ಷಗಳ ಕಾಲ ಮತ್ತು ಸುಮಾರು 35 ವರ್ಷಗಳ ಕಾಲ ಸುಳ್ಯ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದರು. ಅರಂತೋಡು ಮಸೀದಿಯಲ್ಲಿ ಸೇವೆಗೈಯುವ ಸಂದರ್ಭದಲ್ಲಿ ಸರಳಪಥ ಮತ್ತು ಆಲಮುಲ್ ಹುದಾ ಮಾಸಿಕ ಪತ್ರಿಕೆಯನ್ನು ನಡೆಸುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು 1966ರಲ್ಲಿ ಕೈೂಲ ಸಹಕಾರಿ ಸಂಘದ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದರು . ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಹೊರ ತರುವ ಆಲ್ ಹಸನಾತ್ ಶೀರ್ಷಿಕೆ ಯ ಪ್ರಧಾನ ಸಂಪಾದಕರಾಗಿ ದುಡಿಯುತ್ತಿದ್ದರು. ಆತೂರಿನ ಸುತ್ತಮುತ್ತಲಿನ ಮಸೀದಿ ಮದ್ರಸಗಳ ಗೌರವಾಧ್ಯಕ್ಷರಾಗಿ, ಅಧ್ಯಕ್ಷ ರಾಗಿ ಹಾಗೂ ಅರಂತೋಡು ಸ್ವಲಾತ್ ಸಮಿತಿಯ ಗೌರವಧ್ಯಕ್ಷರಾಗಿ ಅನ್ವಾರುಲ್ ಹುದಾ ಯಂಗ್ ಮೇನ್ಸ್ ಎಸೋಸಿಯೆಶನ್ ಗೌರವ ಸಲಹೆಗಾರರಾಗಿದ್ದರು .ಅರಂತೋಡು ಮಸೀದಿಯಿಂದ ನಿವೃತ್ತಿ ಹೊಂದಿರುವ ಇವರಿಗೆ ಅರಂತೋಡು ಜಮಾ ಅತ್ ನಿಂದ ನಿವೃತ್ತಿವೇತನ ವನ್ನು ನೀಡುತ್ತಿದ್ದರು .ಇವರಿಗೆ ಅಪಾರ ಶಿಷ್ಯ ವೃಂದ ದವರನ್ನು ಹೊಂದಿದ್ದಾರೆ.
ಮೃತರು ಪುತ್ರ ರಾದ ಬಶೀರ್,ಪುತ್ರಿಯರಾದ ಸಲಾಮತ್ತ್ ಬರ್ಕತ್ ಝೀನತ್ತ್ ರಹಿಯಾನತ್ ತಾಹಿರಾ ಅವರನ್ನು ಅಗಲಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…