ಸುಳ್ಯ :ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ।ಕೆ.ಎಮ್ ಶಾಹ್ ಮುಸ್ಲಿಯಾರ್( 87 )ಮೇ 29 ರಂದು ಬೆಳಗ್ಗೆ ಆತೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಅತೂರು ಬದ್ರಿಯಾ ಜುಮ್ಮಾಮಸೀದಿಯಲ್ಲಿ ಕೆಲ ವರ್ಷಗಳ ಕಾಲ ಮತ್ತು ಸುಮಾರು 35 ವರ್ಷಗಳ ಕಾಲ ಸುಳ್ಯ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದರು. ಅರಂತೋಡು ಮಸೀದಿಯಲ್ಲಿ ಸೇವೆಗೈಯುವ ಸಂದರ್ಭದಲ್ಲಿ ಸರಳಪಥ ಮತ್ತು ಆಲಮುಲ್ ಹುದಾ ಮಾಸಿಕ ಪತ್ರಿಕೆಯನ್ನು ನಡೆಸುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು 1966ರಲ್ಲಿ ಕೈೂಲ ಸಹಕಾರಿ ಸಂಘದ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದರು . ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಹೊರ ತರುವ ಆಲ್ ಹಸನಾತ್ ಶೀರ್ಷಿಕೆ ಯ ಪ್ರಧಾನ ಸಂಪಾದಕರಾಗಿ ದುಡಿಯುತ್ತಿದ್ದರು. ಆತೂರಿನ ಸುತ್ತಮುತ್ತಲಿನ ಮಸೀದಿ ಮದ್ರಸಗಳ ಗೌರವಾಧ್ಯಕ್ಷರಾಗಿ, ಅಧ್ಯಕ್ಷ ರಾಗಿ ಹಾಗೂ ಅರಂತೋಡು ಸ್ವಲಾತ್ ಸಮಿತಿಯ ಗೌರವಧ್ಯಕ್ಷರಾಗಿ ಅನ್ವಾರುಲ್ ಹುದಾ ಯಂಗ್ ಮೇನ್ಸ್ ಎಸೋಸಿಯೆಶನ್ ಗೌರವ ಸಲಹೆಗಾರರಾಗಿದ್ದರು .ಅರಂತೋಡು ಮಸೀದಿಯಿಂದ ನಿವೃತ್ತಿ ಹೊಂದಿರುವ ಇವರಿಗೆ ಅರಂತೋಡು ಜಮಾ ಅತ್ ನಿಂದ ನಿವೃತ್ತಿವೇತನ ವನ್ನು ನೀಡುತ್ತಿದ್ದರು .ಇವರಿಗೆ ಅಪಾರ ಶಿಷ್ಯ ವೃಂದ ದವರನ್ನು ಹೊಂದಿದ್ದಾರೆ.
ಮೃತರು ಪುತ್ರ ರಾದ ಬಶೀರ್,ಪುತ್ರಿಯರಾದ ಸಲಾಮತ್ತ್ ಬರ್ಕತ್ ಝೀನತ್ತ್ ರಹಿಯಾನತ್ ತಾಹಿರಾ ಅವರನ್ನು ಅಗಲಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…