Advertisement
ಸುದ್ದಿಗಳು

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

Share

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಸಲಹೆ ಮಾಡಿದ್ದಾರೆ.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀವನವು ನಿಂತ ನೀರಾಗಬಾರದು, ಚಟುವಟಿಕೆಯಿಂದ ಕೂಡಿರಬೇಕು. ಹಿರಿಯರಲ್ಲಿ ಲವಲವಿಕೆ ಇದ್ದರೆ ಹೆಚ್ಚು ಸಂತಸ ಸಿಗುತ್ತದೆ. ಹಿರಿಯರು ತಮ್ಮ ಅನುಭವನ್ನು ಮನೆಯಲ್ಲಿರುವ ಕಿರಿಯರಿಗೆ ತಿಳಿಸಿಕೊಡಬೇಕು. ಇದರಿಂದ ಕಿರಿಯರಲ್ಲಿ ಜೀವನದ ಒಳಗುಟ್ಟು ಅರ್ಥವಾಗುತ್ತದೆ. ಜೊತೆಗೆ ಹಿರಿಯರೊಬ್ಬರು ಮನೆಯಲ್ಲಿದ್ದರೆ ಶ್ರೇಯಸ್ಸು ಹೆಚ್ಚುತ್ತದೆ ಎಂದು ಜಿಲ್ಲಾ ಕಾನೂನು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ ಅವರು ಮಾತನಾಡಿ ಹಿರಿಯ ನಾಗರಿಕರು ತುಂಬಾ ಚಟುವಟಿಕೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಹಿರಿಯ ನಾಗರಿಕರು ಸಮಾಜಕ್ಕೆ ಉತ್ತಮ ಮೌಲ್ಯ ನೀಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ತೆರೆಯಲಾಗಿದೆ ಎಂದರು.

ಹಿರಿಯ ನಾಗರಿಕರಾದ ಮಾದಪ್ಪ ಅವರು ತಮ್ಮ ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ, 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ತಮ್ಮ ಅನುಭವ ಹಂಚಿಕೊಂಡರು.

 

ಹಿರಿಯ ನಾಗರಿಕರು ಒಂದೆಡೆ ಸೇರಿ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಪರಿಹಾರ ಮಾರ್ಗೋಪಾಯ ಮತ್ತಿತರ ಚರ್ಚೆ ನಡೆಸಲು ಹಿರಿಯರಿಗಾಗಿ ನಿವೇಶನ ಅಗತ್ಯವಿದ್ದು, ನಿವೇಶನ ಒದಗಿಸಿ ‘ಹಿರಿಯ ನಾಗರಿಕರ ಭವನ’ ನಿರ್ಮಾಣಕ್ಕೆ ಅವಕಾಶ ಮಾಡಬೇಕಿದೆ ಎಂದು ಹಿರಿಯರಾದ ಮಾದಪ್ಪ ಅವರು ಮನವಿ ಮಾಡಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್‍ಕುಮಾರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಇತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

9 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

13 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

17 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

17 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago